ಮನೆ ಅಪರಾಧ ಕರುಳ ಕುಡಿಯನ್ನೇ ಕೊಚ್ಚಿ ಕೊಲೆ ಮಾಡಿದ ಮಾನಸಿಕ ಅಸ್ವಸ್ಥ ತಾಯಿ!

ಕರುಳ ಕುಡಿಯನ್ನೇ ಕೊಚ್ಚಿ ಕೊಲೆ ಮಾಡಿದ ಮಾನಸಿಕ ಅಸ್ವಸ್ಥ ತಾಯಿ!

0

ಮೈಸೂರು: ಮಾನಸಿಕ ಅಸ್ವಸ್ಥೆಯೋರ್ವಳು ತನ್ನ ೪ ವರ್ಷದ ಮಗನನ್ನೇ ಮಚ್ಚಿನಿಂದ ಮನಬಂದತೆ ಕೊಚ್ಚಿ ಕೊಲೆ ಮಾಡಿರುವ ಭೀಭತ್ಸ ಘಟನೆ ಮೈಸೂರು ಜಿಲ್ಲೆಯ ಹೆಚ್‌ಡಿ ಕೋಟೆ ತಾಲೂಕಿನ ಬೂದುನೂರು ಗ್ರಾಮದಲ್ಲಿ ನಡೆದಿದೆ.

ಶ್ರೀನಿವಾಸ ತನ್ನ ತಾಯಿಯಿಂದ ಭೀಕರವಾಗಿ ಕೊಲೆಗೀಡಾದ ಮೃತ ಬಾಲಕ ಎಂದು ತಿಳಿದುಬಂದಿದೆ. ಬೂದುನೂರು ಗ್ರಾಮದ ಶಂಕರ್ ಎಡತೊರೆ ಗ್ರಾಮದ ಭವಾನಿಯನ್ನು ಮದುವೆಯಾಗಿದ್ದು ದಂಪತಿಗೆ ೪ ವರ್ಷದ ಮಗ ಇದ್ದ. ಈಕೆ ತನ್ನ ಮೈಮೇಲೆ ದೇವರು ಬರುತ್ತದೆ ಎಂದು ಹೇಳುತ್ತಿದ್ದು, ಮಾನಸಿಕ ಅಸ್ವಸ್ಥವಾಗಿದ್ದಳು ಎಂದು ತಿಳಿದುಬಂದಿದೆ. ಇದರಿಂದ ಗಂಡನನ್ನ ಬಿಟ್ಟು ಮಗನೊಂದಿಗೆ ತವರು ಮನೆ ಸೇರಿದ್ದಳು.

ಕಳೆದ ೧೫ ದಿನಗಳ ಹಿಂದೆ ಪತಿಯೇ ಹೋಗಿ ಪತ್ನಿ ಮತ್ತು ಮಗನನ್ನ ಬೂದುನೂರಿಗೆ ಕರೆದುಕೊಂಡು ಬಂದಿದ್ದ. ಆದರೆ, ನಿನ್ನೆ ರಾತ್ರಿ ಕೆಲಸ ನಿಮಿತ್ತ ಹೊರಗಡೆ ಹೋದಾಗ ಅಸ್ವಸ್ಥ ತಾಯಿ ತನ್ನ ೪ ವರ್ಷದ ಮಗನ ಮೇಲೆ ಮನಬಂದAತೆ ಹಲ್ಲೆ ನಡೆಸಿದ್ದಾಳೆ. ಇದರಿಂದ ಬಾಲಕನ ತಲೆ ಭಾಗ ಸಂಪೂರ್ಣವಾಗಿ ರಕ್ತಸಿಕ್ತವಾಗಿತ್ತು.
ಮನೆಗೆ ಬಂದು ನೋಡಿದ ಶಂಕರ್ ಗಾಬರಿಯಾಗಿ ಗ್ರಾಮಸ್ಥರ ಸಹಾಯದಿಂದ ಹೆಚ್ ಡಿ ಕೋಟೆ ಆಸ್ಪತ್ರೆಗೆ ಕರೆ ತಂದಿದ್ದನು. ಅಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬಾಲಕನನ್ನ ಮೈಸೂರಿಗೆ ಕರೆದುಕೊಂಡಿದ್ದು ಬಂದಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ.

ಈ ಸಂಬAಧ ಹೆಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಮಾನಸಿನ ಅಸ್ವಸ್ಥೆ ಭವಾನಿ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಹಿಂದಿನ ಲೇಖನಸಿಎಂ ಪುತ್ರ ಭರತ್ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್
ಮುಂದಿನ ಲೇಖನಡಿ.ಕೆ.ಶಿವಕುಮಾರ್ ವಿರುದ್ಧ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸ್ವಯಂಪ್ರೇರಿತ ದೂರು ದಾಖಲು