ಮನೆ ಅಪರಾಧ ಯುವಕನನ್ನು ಬೆತ್ತಲುಗೊಳಿಸಿ ಅತಿರೇಕದ ವರ್ತನೆ

ಯುವಕನನ್ನು ಬೆತ್ತಲುಗೊಳಿಸಿ ಅತಿರೇಕದ ವರ್ತನೆ

0

ಹಾಸನ: ಉದ್ಯಾನವನದಲ್ಲಿ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಯುವಕನೋವರ್ವನನ್ನು ಸಾರ್ವಜನಿಕವಾಗಿ ಬೆತ್ತಲುಗೊಳಿಸಿ ಥಳಿಸಿರುವ ಅಮಾನವೀಯ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ ನಗರದ ಹೇಮಾವತಿ ಪ್ರತಿಮೆ ಬಳಿ ಅಮಾನವೀಯ ಘಟನೆ ನಡೆದಿದೆ.  ಯುವತಿ ಜೊತೆ ಅಸಭ್ಯ ವರ್ತನೆ ತೋರಿದ ಎಂಬ ಕಾರಣಕ್ಕೆ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿ, ನಡು ರಸ್ತೆಯಲ್ಲಿ ಆತನನ್ನು ಎಳೆದಾಡಿದ್ದಾರೆ.ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಯುವಕ ಕೈ ಮುಗಿದು ಬೇಡಿಕೊಂಡರೂ ಬಿಡದ ಯುವಕರ ಗುಂಪು ಆತನ ಮೇಲೆ ಹಲ್ಲೆ ನಡೆಸಿದೆ. ಹಲ್ಲೆಗೊಳಗಾದ ಯುವಕನನ್ನು ವಿಜಯಪುರ ಮೂಲದವನು ಎಂದು ತಿಳಿದು ಬಂದಿದ್ದು, ಹಾಸನದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದನು.

ಹದ್ದು ಮೀರಿ ವರ್ತನೆ ಮಾಡಿದ ಯುವಕರ ವಿರುದ್ದ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ . ಕರ್ನಾಟಕ ಪ್ರಜಾಶಕ್ತಿ ಸಮಿತಿ ಜಿಲ್ಲಾಧ್ಯಕ್ಷ ಪ್ರವೀಣ್‌ಗೌಡ ಹಾಗೂ ಇತರರಿಂದ ಕೃತ್ಯ ನಡೆದಿದೆ.

ಜನನಿಬಿಡ ಪ್ರದೇಶದಲ್ಲೇ ಯುವಕನನ್ನು ಬೆತ್ತಲೆಗೊಳಿಸಿ ಎಳೆದಾಡುವ ದೃಶ್ಯ  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  ನನ್ನನ್ನು ಬಿಟ್ಟು ಬಿಡಿ ಎಂದು ಬೇಡಿಕೊಂಡರೂ ಬಿಡದೆ ಯುವಕನ ಜುಟ್ಟು ಹಿಡಿದು ಮೆರವಣಿಗೆ ಮಾಡಲಾಗಿದೆ. ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರವೀಣ್ ಗೌಡ ಸೇರಿದಂತೆ ಕೆಲವರ ಮೇಲೆ ದೂರು ದಾಖಲು ಆಗಿದೆ.

ಹಿಂದಿನ ಲೇಖನಜ.31ರವರೆಗೂ ಬೆಂಗಳೂರಿನಲ್ಲಿ ಶಾಲೆಗಳು ಬಂದ್.
ಮುಂದಿನ ಲೇಖನನಿತಿನ್ ಗಡ್ಕರಿಗೆ ಮತ್ತೆ ಕೋವಿಡ್