ಮನೆ ರಾಜ್ಯ 8 ವರ್ಷಗಳಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 1.29 ಲಕ್ಷ ಕೋಟಿ ರೂ. ಅನುದಾನ: ಪ್ರತಾಪ್ ಸಿಂಹ

8 ವರ್ಷಗಳಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 1.29 ಲಕ್ಷ ಕೋಟಿ ರೂ. ಅನುದಾನ: ಪ್ರತಾಪ್ ಸಿಂಹ

0

ಮೈಸೂರು(Mysuru): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕಳೆದ 8 ವರ್ಷಗಳಲ್ಲಿ ಕರ್ನಾಟಕಕ್ಕೆ ₹1.29 ಲಕ್ಷ ಕೋಟಿ ನೀಡಿದೆ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು.ಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಜೂನ್‌ 21ರಂದು ವಿಶ್ವ 8ನೇ ಯೋಗ ದಿನಾಚರಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸುತ್ತಿದ್ದಾರೆ. ಕೇಂದ್ರ ಸರ್ಕಾರವು ರಾಜ್ಯಕ್ಕೆ ನರೇಗಾ ಯೋಜನೆಯಡಿ ₹27,418 ಕೋಟಿ ನೀಡಿದ್ದು, ಕೆರೆಗಳ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದರು.ಮೈಸೂರು ಜಿಲ್ಲೆಯಲ್ಲಿ 500 ಕೆರೆಗಳನ್ನು ಅಭಿವೃದ್ಧಿಗೊಳಿಸಲಾಗಿದೆ. ಕೃಷಿ ಕ್ಷೇತ್ರಕ್ಕೆ ₹19,374 ಕೋಟಿ, ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ 47.86 ಲಕ್ಷ ರೈತರಿಗೆ ₹8,704 ಕೋಟಿ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ₹2,111 ಕೋಟಿ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ₹500 ಕೋಟಿ, ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಮೂಲಕ ನೀಡುವ ಸಾಲ ಯೋಜನೆಗೆ ₹19,950 ಕೋಟಿ ನೀಡಲಾಗಿದೆ ಎಂದು ವಿವರಿಸಿದರು.ರಾಜ್ಯದಲ್ಲಿ 3,298 ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ₹1.50 ಲಕ್ಷ ಕೋಟಿ ನಿಗದಿಪಡಿಸಲಾಗಿದೆ. ₹50,527 ಕೋಟಿ ಮೊತ್ತದ ಹೆದ್ದಾರಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಮೈಸೂರು– ಬೆಂಗಳೂರು ಹೆದ್ದಾರಿಗೆ ₹9,551 ಕೋಟಿ ನೀಡಲಾಗಿದೆ. ಮೈಸೂರಿನ ವರ್ತುಲ ರಸ್ತೆಗೆ ಡಾಂಬರು ಹಾಕಲು ₹160 ಕೋಟಿ, ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ ಮಡಿಕೇರಿಗೆ ₹4 ಸಾವಿರ ಕೋಟಿ ನೀಡಲಾಗಿದೆ. ರಾಜ್ಯದ 27 ಜಿಲ್ಲೆಗಳಲ್ಲಿ ಪಾಸ್‌ಪೋರ್ಟ್‌ ಸೇವಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದರು.

ಮೋದಿ ವಿದೇಶಾಂಗ ನೀತಿಗೆ ಸಂಬಂಧಿಸಿದಂತೆ ರಾಷ್ಟ್ರದ ಹಿತಾಸಕ್ತಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ. ಉಕ್ರೇನ್‌ ಯುದ್ಧದ ಬಿಕ್ಕಟ್ಟಿನ ವಿಚಾರದಲ್ಲಿ ಅಮೆರಿಕ, ಯುರೋಪ್‌ ರಾಷ್ಟ್ರಗಳ ಒತ್ತಡ ಇದ್ದರೂ ರಷ್ಯಾದೊಂದಿಗೆ ಉತ್ತಮ ಸಂಬಂಧವನ್ನು ಸಾಧಿಸಿ ಕಡಿಮೆ ದರಕ್ಕೆ ತೈಲವನ್ನು ಖರೀದಿಸಿ, ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ₹9ರಿಂದ ₹10 ಕಡಿಮೆ ಮಾಡಿದ್ದಾರೆ’ ಎಂದು ತಿಳಿಸಿದರು.

ಹಿಂದಿನ ಲೇಖನತಂಬಾಕು ಮಂಡಳಿ ನಿರ್ದೇಶಕರಾಗಿ ಮಾಜಿ ಶಾಸಕ ಎಚ್‌. ಸಿ ಬಸವರಾಜು ನೇಮಕ
ಮುಂದಿನ ಲೇಖನರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ನವರು ಬಿಜೆಪಿ ವೋಟ್ ಕೇಳ್ತಾರೇನೋ ?-  ಹೆಚ್.ಡಿ.ರೇವಣ್ಣ