ಮನೆ ಸುದ್ದಿ ಜಾಲ ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ 1 ಲಕ್ಷ ರೂ. ದೇಣಿಗೆ

ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ 1 ಲಕ್ಷ ರೂ. ದೇಣಿಗೆ

0

ಮೈಸೂರು (Mysuru): ಶ್ರೀ ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 107ನೇ ಜಯಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಆಗಸ್ಟ್‌ 29 ರಂದು ಮೃಗಾಲಯದ ಎಲ್ಲಾ ಪ್ರಾಣಿಗಳ ಒಂದು ದಿನದ ಆಹಾರ ನಿರ್ವಹಣೆಯ ವೆಚ್ಚಕ್ಕಾಗಿ ಸುತ್ತೂರು ಮಠದ ವತಿಯಿಂದ 1 ಲಕ್ಷ ರೂ. ದೇಣಿಗೆಯನ್ನು ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ ನೀಡಲಾಗಿದೆ.

ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಶ್ರೀ ಮಠವು ಈ ಮೃಗಾಲಯದ ಸಂರಕ್ಷಣಾ ಕಾರ್ಯದಲ್ಲಿ ನಿರಂತರ ಭಾಗಿಯಾಗುವುದರ ಜೊತೆಗೆ ಇತರ ಸಂಘ ಸಂಸ್ಥೆಗಳಿಗೆ ಮತ್ತು ಪ್ರಾಣಿ ಪ್ರಿಯರುಗಳಿಗೆ ಒಂದು ಮಾದರಿಯಂತಾಗಿ ಇತರ ಸಂಘ ಸಂಸ್ಥೆಗಳು ಮತ್ತು ಪ್ರಾಣಿ ಪ್ರಿಯರುಗಳಿಗೂ ಸಹ ಈ ಸಂರಕ್ಷಣಾ ಕಾರ್ಯಕ್ರಮದುಲ್ಲಿ ಭಾಗವಹಿಸಲು ಪ್ರೇರೇಪಣೆ ನೀಡಿದೆ ಎಂದು ಶ್ರೀ ಚಾಮರಾಜೇಂದ್ರ ಮೃಗಾಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದಿನ ಲೇಖನಬಿಡಿಎ ಆಯುಕ್ತ ರಾಜೇಶ್‌ ಗೌಡ ವರ್ಗಾವಣೆ: ನೂತನ ಆಯುಕ್ತರಾಗಿ ಕುಮಾರ್‌ ನಾಯ್ಕ್‌ ನೇಮಕ
ಮುಂದಿನ ಲೇಖನಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ: ನಾಳೆ ಸಭೆ ನಡೆಸಿ ಮುಂದಿನ ತೀರ್ಮಾನ; ಸಿಎಂ ಬೊಮ್ಮಾಯಿ