ಮನೆ ರಾಜ್ಯ ಸಿ.ಟಿ.ರವಿ, ಡಾ.ಯತೀಂದ್ರ ಸೇರಿ 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ

ಸಿ.ಟಿ.ರವಿ, ಡಾ.ಯತೀಂದ್ರ ಸೇರಿ 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ

0

ಬೆಂಗಳೂರು: ರಾಜ್ಯ ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಯಲ್ಲಿ 11 ಅಭ್ಯರ್ಥಿಗಳು ಗುರುವಾರ ಅವಿರೋಧವಾಗಿ ಗೆದ್ದಿದ್ದಾರೆ.

Join Our Whatsapp Group

ನಿರೀಕ್ಷೆಯಂತೆ ಕಾಂಗ್ರೆಸ್ ನಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್.ಬೋಸರಾಜು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ, ವಸಂತ್ ಕುಮಾರ್, ಕೆ. ಗೋವಿಂದರಾಜ್, ಐವನ್ ಡಿ ಸೋಜಾ, ಬಿಲ್ಕಿಸ್ ಬಾನೋ ಮತ್ತು ಜಗದೇವ್ ಗುತ್ತೇದಾರ್ ಆಯ್ಕೆಯಾಗಿದ್ದಾರೆ.

ಬಿಜೆಪಿಯಿಂದ ಮಾಜಿ ಸಚಿವ ಸಿ.ಟಿ.ರವಿ, ರವಿ ಕುಮಾರ್ ಎನ್, ಮಾರುತಿ ರಾವ್ ಮುಳೆ ಮತ್ತು ಮಿತ್ರ ಪಕ್ಷ ಜೆಡಿಎಸ್ ನಿಂದ ಜವರಾಯಿ ಗೌಡ ಅವಿರೋಧವಾಗಿ ಮೇಲ್ಮನೆಗೆ ಆಯ್ಕೆಯಾಗಿದ್ದಾರೆ.

11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಗುರುವಾರ ಚುನಾವಣಾಧಿಕಾರಿ ಘೋಷಿಸಿದ್ದಾರೆ.

ಹಿಂದಿನ ಲೇಖನಹಾರ್ಟ್ ಫೆಲ್ಯೂರ್: ಭಾಗ ಒಂದು
ಮುಂದಿನ ಲೇಖನ‘ಸಹಾರಾ’ ಚಿತ್ರದ ಹಾಡು ಬಿಡುಗಡೆ ಮಾಡಿದ ನಟ ಗಣೇಶ್