ಮನೆ ಅಪರಾಧ 1500 ರೂ. ಗಾಗಿ ಬಾರ್’ನಲ್ಲಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ

1500 ರೂ. ಗಾಗಿ ಬಾರ್’ನಲ್ಲಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ

0

ಬೆಂಗಳೂರು ಗ್ರಾಮಾಂತರ: ಕೇವಲ 1,500 ರೂಪಾಯಿ ವಿಚಾರಕ್ಕೆ ಕೊಲೆ ನಡೆದಿರುವ ಘಟನೆ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯ ಸಿಂಗಸಂದ್ರದಲ್ಲಿ ನಡೆದಿದೆ.

ಬಾರ್​ ವೊಂದರಲ್ಲಿ ಗೋಪಾಲ್​, ಶಶಿ ಹಾಗೂ ಕರಿಗೌಡ ಎಂಬುವವರು ಮದ್ಯ ಸೇವಿಸುತ್ತಿದ್ದರು. ಇದೇ ವೇಳೆ ಅದೇ ಬಾರ್​ ಗೆ ಪ್ರದೀಪ್ ಎಂಬುವವರ​ ಜೊತೆ ಆರೋಪಿ ಗಿರೀಶ್ ಬಂದಿದ್ದಾರೆ. ಕರಿಗೌಡಗೆ 1,500 ರೂಪಾಯಿಯನ್ನು ಆರೋಪಿ ಗಿರೀಶ್​ ಗೆ ಕೊಡಬೇಕಿತ್ತು. ಅದರಂತೆ ಆತ ತನ್ನ ಹಣ ಕೇಳಿದಾಗ, ಗಿರೀಶ್ ಅವಾಜ್​ ಹಾಕಿದ್ದ. ಬಳಿಕ ಮಧ್ಯಪ್ರವೇಶಿಸಿದ ಗೋಪಾಲ್ ಎಂಬಾತ, ಗಿರೀಶ್​ ಗೆ ಹೊಡೆದು ಹಣ ಕೊಡಿಸಿದ್ದ​.

ಇದಾದ ಬಳಿಕ ಗಿರೀಶ್, ಶಶಿಗೆ ಪೋನ್ ಮಾಡಿ ಅವಾಚ್ಯ ಶಬ್ಧಗಳಲ್ಲಿ ನಿಂದಿಸಿದ್ದ. ಆಮೇಲೆ ಗೋಪಾಲ್, ಕರೆಗೌಡ ಹಾಗೂ ಶಶಿಧರ್, ಗಿರೀಶ್ ಮನೆಗೆ ಹೋಗಿದ್ದರು. ಗಿರೀಶ್ ​ಗೆ ಸರಿಯಾಗಿ ಮಾತನಾಡುವಂತೆ ಆತನ ಪತ್ನಿ ಬಳಿಯಲ್ಲಿ ಮೂವರು ಹೇಳಿದ್ದರು. ಈ ವೇಳೆ ಅಡುಗೆ ಮನೆಯಿಂದ ಚಾಕು ತಂದು ಬೆನ್ನ ಹಿಂದೆ ಇಟ್ಟುಕೊಂಡಿದ್ದ ಗಿರೀಶ್, ಗೋಪಾಲ್ ಎದೆಗೆ ಚಾಕುವಿನಿಂದ ಚುಚ್ಚಿ ಮನೆಯಿಂದ ಎಸ್ಕೇಪ್ ಆಗಿದ್ದ.

ಇನ್ನು ಆತ ಚಾಕು ಇರಿಯುತ್ತಿದ್ದಂತೆ ಆತನ ಸ್ನೇಹಿತರು, ಗೋಪಾಲ್ ​​ನನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಎರಡು ದಿನಗಳ ಬಳಿಕ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾನೆ.

ಆರೋಪಿ ಗಿರೀಶ್​ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈ ಕುರಿತು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲಾಗಿದೆ.

ಹಿಂದಿನ ಲೇಖನಸಿಎಂ ವೇದಿಕೆಯಲ್ಲಿ ಐಸಿಸ್ ಸಂಪರ್ಕವಿದ್ದ ಮೌಲ್ವಿ ಆರೋಪ: ಫೋಟೊ ಬಿಡುಗಡೆ ಮಾಡಿದ ಶಾಸಕ ಯತ್ನಾಳ್
ಮುಂದಿನ ಲೇಖನಅಲ್ಪಸಂಖ್ಯಾತರ ಓಲೈಕೆಯಿಂದ ಮುಂದಿನ ಚುನಾವಣೆಯಲ್ಲಿ ಗೆಲ್ಲಬಹುದೆಂಬ ಕಾಂಗ್ರೆಸ್ ಲೆಕ್ಕಾಚಾರ ಕೈಗೂಡುವುದಿಲ್ಲ: ಬಿ.ಎಸ್. ಯಡಿಯೂರಪ್ಪ