ಮನೆ ರಾಷ್ಟ್ರೀಯ ಬಿಜೆಪಿಯಿಂದ ಆಪ್ ಶಾಸಕರಿಗೆ ತಲಾ 20 ಕೋಟಿ ರೂ. ಆಮಿಷ: ಆರೋಪ

ಬಿಜೆಪಿಯಿಂದ ಆಪ್ ಶಾಸಕರಿಗೆ ತಲಾ 20 ಕೋಟಿ ರೂ. ಆಮಿಷ: ಆರೋಪ

0

ನವದೆಹಲಿ(Newdelhi): ದೆಹಲಿಯ ಎಎಪಿ ಪಕ್ಷದ ಎಲ್ಲಾ 62 ಶಾಸಕರನ್ನು ಸೆಳೆಯುವ ಯತ್ನವನ್ನು ಬಿಜೆಪಿ ಮಾಡಿದ್ದು, 40 ಶಾಸಕರಿಗೆ ಬಿಜೆಪಿ ತಲಾ 20 ಕೋಟಿ ರೂ. ಆಮಿಷ ಒಡ್ಡಿದೆ ಎಂದು ಗಂಭೀರ ಆರೋಪವನ್ನು ಮಾಡಲಾಗಿದೆ.

ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ನಿವಾಸದಲ್ಲಿ ನಡೆದ ಮಹತ್ವದ ಸಭೆಯಲ್ಲಿ ದೂರಲಾಗಿದೆ. ಸಭೆಯು ಕೆಲವೇ ನಿಮಿಷಗಳಲ್ಲಿ ಮುಕ್ತಾಯಗೊಂಡಿದ್ದು, ಕೇಜ್ರಿವಾಲ್‌ ಸೇರಿದಂತೆ ಒಟ್ಟು 53 ಶಾಸಕರು ಉಪಸ್ಥಿತರಿದ್ದರು.

ಎಎಪಿ ಮುಖ್ಯ ವಕ್ತಾರ ಸೌರಭ್‌ ಭಾರದ್ವಾಜ್‌  ಸಭೆ ಕುರಿತು ಮಾತನಾಡಿ, ಸಚಿವ ಸತ್ಯೇಂದ್ರ ಜೈನ್‌ ಜೈಲಿನಲ್ಲಿರುವುದರಿಂದ ಸಭೆಗೆ ಗೈರಾಗಿದ್ದರು. ಉಳಿದಂತೆ 7 ಶಾಸಕರು ಸಭೆಯಿಂದ ಹೊರಗೆ ಉಳಿದಿದ್ದರು. ಈ ಪೈಕಿ ಓಕ್ಲಾ ಶಾಸಕ ಅಮಾನತುಲ್ಲಾ ಖಾನ್‌ ಅವರು ದೂರವಾಣಿ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ಹೇಳಿದ್ದಾರೆ.

ಸಭೆ ಬಳಿಕ ಎಎಪಿಯ ಎಲ್ಲ ಶಾಸಕರು ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಭೇಟಿ ನೀಡಿ, ಬಿಜೆಪಿಯ ‘ಆಪರೇಷನ್‌ ಕಮಲ’ ವಿಫಲಗೊಳ್ಳಲು ಪ್ರಾರ್ಥನೆ ಸಲ್ಲಿಸಿದ್ದಾರೆ.

ಸಭೆಗೂ ಮುನ್ನ ಕೆಲವು ದಿನಗಳಿಂದ ಎಎಪಿಯ 12 ಶಾಸಕರು ಸಂಪರ್ಕಕ್ಕೆ ಸಿಗುತ್ತಿಲ್ಲ ಎನ್ನಲಾಗಿತ್ತು.40 ಶಾಸಕರಿಗೆ ತಲಾ ₹20 ಕೋಟಿಯಂತೆ ₹800 ಕೋಟಿ ಆಮಿಷ ಒಡ್ಡಲು ದುಡ್ಡು ಎಲ್ಲಿಂದ ಬಂದಿದೆ ಎಂಬುದನ್ನು ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ತನಿಖೆ ನಡೆಸಬೇಕು ಎಂದು ಭಾರದ್ವಾಜ್‌ ಒತ್ತಾಯಿಸಿದ್ದಾರೆ.

ಎಎಪಿ ಶಾಸಕರನ್ನು ಸೆಳೆಯುವ ಪ್ರಯತ್ನದ ಆರೋಪಗಳನ್ನು ಬಿಜೆಪಿ ತಳ್ಳಿಹಾಕಿದೆ.

ಹಿಂದಿನ ಲೇಖನಕೆಪಿಟಿಸಿಎಲ್ ಪರೀಕ್ಷೆ ಅಕ್ರಮ: ಮತ್ತೆ ಮೂವರ ಬಂಧನ
ಮುಂದಿನ ಲೇಖನಬಾಗಲಕೋಟೆಯ ಆನದಿನ್ನಿ ಏತ ನೀರಾವರಿ ಯೋಜನೆಯ 2ನೇ ಹಂತದ ಕಾಮಗಾರಿ ಯೋಜನೆಗೆ ಸಚಿವ ಸಂಪುಟ ಅನುಮೋದನೆ