ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಕಡಬ(ದಕ್ಷಿಣ ಕನ್ನಡ): ಅಪ್ರಾಪ್ತನಿಗೆ ವಾಹನ ಚಲಾಯಿಸಲು ನೀಡಿದ ತಪ್ಪಿಗೆ ಆತನ ತಂದೆಗೆ ಪುತ್ತೂರು ಎಸಿಜೆಜೆಎಂಎಫ್ಸಿ ನ್ಯಾಯಾಲಯ ಬರೋಬ್ಬರಿ 20 ಸಾವಿರ ರೂಪಾಯಿ ದಂಡ ವಿಧಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲ ಗ್ರಾಮದ ಕೆ.ಸಿ. ಫಾರ್ಮ್ ನಿವಾಸಿ ಅಬ್ದುಲ್ ರಹಿಮಾನ್ ದಂಡ ಪಾವತಿಸಿದವರು.
2020ನೇ ಇಸವಿಯಲ್ಲಿ ಕೊಯಿಲದಲ್ಲಿ ಅಬ್ದುಲ್ ರಹಿಮಾನ್ ಎಂಬವರು ತಮ್ಮ ಅಪ್ರಾಪ್ತ ವಯಸ್ಸಿನ ಮಗನಿಗೆ ಬೈಕ್ ಚಲಾಯಿಸಲು ನೀಡಿದ್ದರು.
ಆ ಸಮಯದಲ್ಲಿ ಬೈಕ್ ಅಪಘಾತವಾಗಿ ಅಪ್ರಾಪ್ತ ಬಾಲಕನ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಬಗ್ಗೆ ಪುತ್ತೂರು ಎಸಿಜೆಜೆಎಂಎಫ್ಸಿ ನ್ಯಾಯಾಲಯದಲ್ಲಿ ದೂರು ದಾಖಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶ ಯೋಗೀಂದ್ರ ಶೆಟ್ಟಿಯವರು ತೀರ್ಪು ನೀಡಿದ್ದಾರೆ.
ಅಪ್ರಾಪ್ತ ಬಾಲಕನಿಗೆ ವಾಹನ ಚಲಾಯಿಸಲು ವಾಹನವನ್ನು ನೀಡಿದ್ದ ವಾಹನ ಮಾಲೀಕರಿಗೆ 20 ಸಾವಿರ ರೂ. ದಂಡ ಪಾವತಿಸುವಂತೆ ಆದೇಶ ನೀಡಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕರಾರದ ಕವಿತಾ ಅವರು ನ್ಯಾಯಾಲಯದಲ್ಲಿ ವಾದಿಸಿದ್ದರು.