ಬನ್ನೂರು: ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಇಟ್ಟಿದ್ದ 27 ಲಕ್ಷ ನಗದು ಹಾಗೂ 308 ಗ್ರಾಂ ಚಿನ್ನಾಭರಣ ಕಳುವಾದ ಘಟನೆ ಬನ್ನೂರಿನ ಹೊರಕೇರಿ ವಾರ್ಡ್ ನಲ್ಲಿ ನಡೆದಿದೆ.
ಗೋವಿಂದ ಎಂಬುವರ ಮನೆಯ ಬೀರು ಬಾಗಿಲು ಮುರಿದಿರುವ ಚಾಲಾಕಿಗಳು ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ.
ತಮ್ಮ ಮನೆಗೆ ಹೊಂದಿಕೊಂಡಂತೆ ಮತ್ತೊಂದು ಮನೆಯಲ್ಲಿ ವಾಸ ಮಾಡುತ್ತಿರುವ ತಾಯಿ ಮಗಳು ಕಳ್ಳತನ ಮಾಡಿರುವುದಾಗಿ ಗೋವಿಂದ ರವರು ಆರೋಪಿಸಿ ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಜೂ 5 ರಂದು ಗೋವಿಂದ ರವರು ತಾವು ಹಾಗೂ ತಮ್ಮ ಸಹೋದರನ ಕುಟುಂಬ ಸಮೇತ ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದಾರೆ.
ಜೂನ್ 6 ರಂದು ಹಿಂದಿರುಗಿದಾಗ ಮನೆಯಲ್ಲಿದ್ದ ಲಾಕರ್ ಬೀಗ ಮುರಿದಿದ್ದು ಅದರಲ್ಲಿದ್ದ 27 ಲಕ್ಷ ನಗದು ಹಾಗೂ 308 ಗ್ರಾಂ ಒಡವೆಗಳು ನಾಪತ್ತೆಯಾಗಿದೆ.ಅಕ್ಕನ ಮಗನ ಮದುವೆಗೆ ಉಡುಗೊರೆಯಾಗಿ ನಿವೇಶನ ಖರೀದಿಸುವ ಸಲುವಾಗಿ ಗೋವಿಂದ ಹಣವನ್ನ ಹೊಂದಿಸಿ ಇಟ್ಟಿದ್ದರು.ಈ ವಿಚಾರ ಮುಂದಿನ ಮನೆಯಲ್ಲಿದ್ದ ತಾಯಿ ಮಗಳಾದ ಮೀನಾಕ್ಷಮ್ಮ ಹಾಗೂ ರತ್ನ ಇಬ್ಬರಿಗೆ ಮಾತ್ರ ತಿಳಿದಿತ್ತು. ಮನೆಯ ಸದಸ್ಯರಂತೆ ಗೋವಿಂದ ಮನೆಯವರ ಜೊತೆ ಇವರು ಆತ್ಮೀಯವಾಗಿದ್ದರು.
ನಗದು ಮತ್ತು ಒಡವೆಗಳನ್ನ ಮೀನಾಕ್ಷಮ್ಮ ಹಾಗೂ ರತ್ನ ರವರೇ ಕಳುವು ಮಾಡಿದ್ದಾರೆಂದು ಗೋವಿಂದ ಆರೋಪಿಸಿ ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.