ಮನೆ ರಾಜ್ಯ ಪಂಚಮಸಾಲಿಗೆ 2ಎ ಮೀಸಲಾತಿ: ಹಿಂದುಳಿದ ಆಯೋಗದ ವರದಿ ಆಧರಿಸಿ ಕ್ರಮ- ಸಿಎಂ ಬೊಮ್ಮಾಯಿ

ಪಂಚಮಸಾಲಿಗೆ 2ಎ ಮೀಸಲಾತಿ: ಹಿಂದುಳಿದ ಆಯೋಗದ ವರದಿ ಆಧರಿಸಿ ಕ್ರಮ- ಸಿಎಂ ಬೊಮ್ಮಾಯಿ

0

ಬೆಳಗಾವಿ(Belagavi):  ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯ ಕೇಳಿ ಬಂದಿದ್ದು, ಹಿಂದುಳಿದ ಆಯೋಗದ ವರದಿ ಆಧರಿಸಿ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಳಗಾವಿಯಲ್ಲಿ ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸರ್ಕಾರ ಹಿಂದುಳಿದ ಆಯೋಗಕ್ಕೆ ಸೂಚನೆ ನೀಡಿದೆ.  ವರದಿ ಮಂಡನೆಗೆ ಸೂಚನೆ ನೀಡಲಾಗಿದೆ. ವರದಿ ಆಧರಿಸಿ  ಕ್ರಮ ಕೈಗೊಳ್ಳಲಾಗುವುದು ಎಂದರು.

ಡಿಕೆ ಶಿವಕುಮಾರ್ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ಕುರಿತು ಪ್ರತಿಕ್ರಿಯಿಸಿ, ಡಿಕೆ ಶಿವಕುಮಾರ್ ಮೇಲಿರುವ ಕೇಸ್ ಗಳ ಆಧಾರದ ಮೇಲೆ ಸಿಬಿಐ ಕ್ರಮ ಕೈಗೊಳ್ಳುತ್ತಿದೆ .  ಸಿಬಿಐ ಮುಂದೆ ಯಾವ ಕೇಸ್ ಇದೆ ಅನ್ನೋದು ಗೊತ್ತು. ಸಿಬಿಐ ಅನ್ನೋದು ಸಂವಿಧಾನಿಕ ಸಂಸ್ಥೆ ಎಂದರು.

ಹಿಂದಿನ ಲೇಖನಮೃತನ ವಿವಾಹೇತರ ಸಂಬಂಧದ ಮಕ್ಕಳಿಗೂ ಪರಿಹಾರದ ಹಕ್ಕಿದೆ : ಹೈಕೋರ್ಟ್
ಮುಂದಿನ ಲೇಖನಸಿಬಿಐ ದಾಳಿ: ಡಿಕೆಶಿ ಆರೋಪದಲ್ಲಿ ಹುರುಳಿಲ್ಲ ಎಂದ ಸಚಿವ ಆರ್.ಅಶೋಕ್