ಮನೆ ರಾಜ್ಯ 33 ಸಾವಿರ ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಅಡಿಗಲ್ಲು: ಸಿಎಂ ಬೊಮ್ಮಾಯಿ

33 ಸಾವಿರ ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಅಡಿಗಲ್ಲು: ಸಿಎಂ ಬೊಮ್ಮಾಯಿ

0

ಬೆಂಗಳೂರು(Bengaluru): 33 ಸಾವಿರ ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಅಡಿಗಲ್ಲು ಹಾಕಲಾಗುತ್ತಿದ್ದು,  ಕರ್ನಾಟಕದ ಇತಿಹಾಸದಲ್ಲೇ ಇದು ಹೊಸ ಮೈಲಿಗಲ್ಲು ಎಂದು ಸಿಎಂ ಬಸವರಾಜ ಬೊಮ್ಮಾಯಿ ನುಡಿದರು.

ಕೊಮ್ಮಘಟದಲ್ಲಿ ಆಯೋಜಿಸಿರುವ ಬೃಹತ್​ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ನಾಡಗೀತೆಯೊಂದಿಗೆ ಆರಂಭಗೊಂಡ ಸಮಾವೇಶದಲ್ಲಿ ಬಹುನಿರೀಕ್ಷಿತ  ವಿವಿಧ ಯೋಜನೆಗಳಿಗೆ ಪ್ರಧಾನಿ ಚಾಲನೆ ನೀಡಿದರು. ಪೂರ್ಣಗೊಂಡ ಹಲವು ಯೋಜನೆಗಳನ್ನು ಲೋಕಾರ್ಪಣೆ ಮಾಡಿದರು. ಜತೆಗೆ ಹಲವು ಮಹತ್ತರ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದರು.

ಮೈಸೂರು ಪೇಟ, ಶಾಲು ತೊಡಿಸಿ ಪ್ರಧಾನಿ ಮೋದಿ ಅವರಿಗೆ ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಮುಖ್ಯಮಂತ್ರ ಬಸವರಾಜ ಬೊಮ್ಮಾಯಿ, ಸಬ್ ಅರ್ಬನ್ ರೈಲು ಯೋಜನೆಗೆ ಮೋದಿ ಶಿಲನ್ಯಾಸ ನೆರವೇರಿಸಲಿದ್ದಾರೆ.  ಬೆಂಗಳೂರಿನ ಅಭಿವೃದ್ದಿಗೆ ಮಹತ್ವದ ಯೋಜನೆ ಇದಾಗಿದೆ. ಇದು ಸಂಚಾರ ದಟ್ಟಣೆಗೆ ಇತಿಶ್ರೀ ಹಾಡಲಿದೆ. ಪ್ರಧಾನಿ ಮೋದಿ ಯೋಜನೆಯನ್ನ ರಾಜ್ಯಕ್ಕೆ ಕೊಡುಗೆಯಾಗಿ ನೀಡಲಿದ್ದಾರೆ. ದೂರದೃಷ್ಠಿ ನಾಯಕತ್ವದಿಂದ ಮಾತ್ರ ಇದು ಸಾಧ್ಯವಾಗುತ್ತದೆ ಎಂದರು.

ಬೆಂಗಳೂರಿನ ಇತಿಹಾಸದಲ್ಲೇ ಸುರ್ವಣಾಕ್ಷರದಲ್ಲಿ ಬರೆದಿರುವ ದಿನ.  4 ದಿಕ್ಕಿನಲ್ಲಿ ಬೆಂಗಳೂರಿನ ವಿವಿಧ ಭಾಗಗಳಿಗೆ ಸಂಪರ್ಕಿಸುವ ಯೋಜನೆ ಇದಾಗಿದೆ. ಬೆಂಗಳೂರು ಸಂಚಾರ ದಟ್ಟಣೆ ಕಡಿಮೆಗಾಗಿ ರೈಲು ಯೋಜನೆ ಜಾರಿಯಾಗಲಿದೆ. ಮೋದಿಯವರ ದೂರದೃಷ್ಠಿಯ ಯೋಜನೆಗಳು ಜಾರಿಯಾಗುತ್ತಿದೆ ಎಂದರು.

ರಾಜಕಾರಣಿ ಕಣ್ಣು ಚುನಾವಣೆ ಮೇಲೆ ಇರುತ್ತದೆ ಆದರೆ ಮುತ್ಸದ್ಧಿ ನಾಯಕನ ಕಣ್ಣು ಅಭಿವೃದ್ಧಿ ಮೇಲಿರುತ್ತೆ. ಮೋದಿ ಅವರದ್ದು ಕೇವಲ ದೊಡ್ಡ ಯೋಜನೆಗಳಲ್ಲ.  ಎಲ್ಲಾ ಸಂಪನ್ಮೂಲಗಳನ್ನು ಬಳಸಿಕೊಳ್ಳುವ ಯೋಜನೆ . ರಾಜ್ಯದ ಎಲ್ಲಾ ಯೋಜನೆಗಳಿಗೆ ಸಹಾಯ ಹಸ್ತ ನೀಡಿದ್ದಾರೆ. ಬಡವರು ರೈತರಿಗೆ ಹಲವು ಕಾರ್ಯಕ್ರಮ ಜಾರಿಗೊಳಿಸಿದ್ದಾರೆ ಎಂದು ನುಡಿದರು.

ಹಿಂದಿನ ಲೇಖನಮೋದಿ ‘ಗೋಬ್ಯಾಕ್’: ರೈತ ಸಂಘ, ದಸಂಸ ಕಾರ್ಯಕರ್ತರ ಘೋಷಣೆ
ಮುಂದಿನ ಲೇಖನವಾಟ್ಸ್‌ಆ್ಯಪ್: ನಿರ್ದಿಷ್ಟ ಜನರಿಗೆ ಮಾತ್ರ ಡಿಪಿ ಕಾಣಿಸುವ ಅಪ್‌ಡೇಟ್