ಮನೆ ರಾಜ್ಯ ಕಳೆದ 3 ವರ್ಷದಲ್ಲಿ 40 ಸಾವಿರ ಮಹಿಳೆಯರು ನಾಪತ್ತೆ: ಸರ್ಕಾರ ಹೈಕೋರ್ಟ್ ನ್ಯಾಯಾಧೀಶರ  ನೇತೃತ್ವದಲ್ಲಿ ಸೂಕ್ತ...

ಕಳೆದ 3 ವರ್ಷದಲ್ಲಿ 40 ಸಾವಿರ ಮಹಿಳೆಯರು ನಾಪತ್ತೆ: ಸರ್ಕಾರ ಹೈಕೋರ್ಟ್ ನ್ಯಾಯಾಧೀಶರ  ನೇತೃತ್ವದಲ್ಲಿ ಸೂಕ್ತ ತನಿಖೆ ನಡೆಸಲಿ- ಪ್ರಮೋದ್ ಮುತಾಲಿಕ್

0

ಹುಬ್ಬಳ್ಳಿ: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಸುಮಾರು 40,000 ಮಹಿಳೆಯರು ಕಾಣೆಯಾಗಿದ್ದು 45,000 ಅಪ್ರಾಪ್ತರು ಗರ್ಭಿಣಿಯಾಗಿದ್ದಾರೆ. ಇದೊಂದು ಭಯಾನಕ ಸ್ಥಿತಿಯಾಗಿದ್ದು ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ, ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸೂಕ್ತ ತನಿಖೆ ತನಿಖೆ ನಡೆಸಬೇಕು. ಇಂತಹ ಕೃತ್ಯಗಳ ತಡೆಗೆ ವಿಶೇಷ ಪಡೆ ರಚಿಸಬೇಕೆಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 25 ಸಾವಿರ ಮಕ್ಕಳ ಕಾಣೆಯಾಗಿದ್ದು ಮಹಿಳೆಯರ ನಾಪತ್ತೆಯಿಂದ ಲವ್ ಜಿಹಾದ್ ಉದ್ದೇಶದ ಆತಂಕ ಇದ್ದು ಈ ಬಗ್ಗೆ ವಿಶೇಷ ಗಮನ ಹರಿಸಬೇಕಾಗಿದೆ ಎಂದು ನುಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಒಂದರಲ್ಲೇ ಕಳೆದ 11 ವರ್ಷಗಳಲ್ಲಿ 434 ಮಹಿಳೆಯರು ಕಾಣೆಯಾಗಿದ್ದು, ಸುಮಾರು 452 ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ಕೃತ್ಯಗಳ ಬಗ್ಗೆ ಲಘುವಾಗಿ ಪರಿಗಣಿಸುವುದು ಯಾವುದೇ ಪಕ್ಷದ ಸರ್ಕಾರಕ್ಕೂ ಒಳ್ಳೆಯದಲ್ಲ ಎಂದರು.

ಸೌಜನ್ಯ ಕೊಲೆ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ಸೌಜನ್ಯ ಕೊಲೆ ಪ್ರಕರಣ ಅತ್ಯಂತ ಸೂಕ್ಷ್ಮವಾಗಿದ್ದು ತನಿಖೆಯಲ್ಲಿ ಲೋಪ, ಕೇಸನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕುವ ಯತ್ನಗಳು ಸಾಕಷ್ಟು ನಡೆದಿವೆ ಎಂಬುದು ಗೋಚರಿಸುತ್ತಿದೆ ಈ ಬಗ್ಗೆ ಸರಕಾರ ಸಮಗ್ರ ತನಿಖೆಗೆ ಮುಂದಾಗಬೇಕಾಗಿದೆ. ಸೌಜನ್ಯ ಪ್ರಕರಣದಲ್ಲಿ ನ್ಯಾಯ ದೊರಕಿಸಬೇಕೆಂದು ಒತ್ತಾಯಿಸಿ ಮಾಸಾಂತ್ಯಕ್ಕೆ ಹುಬ್ಬಳ್ಳಿಯಿಂದ ಉತ್ತರ ಕರ್ನಾಟಕದಲ್ಲಿ ಹೋರಾಟಕ್ಕೆ ಚಾಲನೆ ನೀಡಲಾಗುತ್ತಿದ್ದು ಸೌಜನ್ಯ ಅವರ ತಾಯಿ ಈ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಲವ್ ಜಿಹಾದ್ ವಿರುದ್ಧ ಧರ್ಮ, ಜಾತಿ ರಹಿತ ಹೋರಾಟ ಆಗಬೇಕಿದೆ

ಮಹಿಳೆಯರ ಮೇಲೆ ದೌರ್ಜನ್ಯ ಲವ್ ಜಿಹಾದ್, ಕಿಡ್ನಾಪ್, ನಾಪತ್ತೆಯಂತಹ ಪ್ರಕರಣಗಳ ಬಗ್ಗೆ ಸಂಘಟಿತ ಹೋರಾಟದ ಅಗತ್ಯವಿದ್ದು ಈ ಬಗ್ಗೆ ನಾನೇ ಖುದ್ದಾಗಿ ಹಿಂದೂಪರ ಸಂಘಟನೆಗಳೆಲ್ಲವನ್ನು ಭೇಟಿಯಾಗಿ ಹೋರಾಟಕ್ಕೆ ಕೈಜೋಡಿಸುವಂತೆ ಮನವಿ ಮಾಡುತ್ತೇನೆ. ಧರ್ಮ, ಜಾತಿ ರಹಿತ ಹೋರಾಟ ಆಗಬೇಕಾಗಿದೆ ಎಂದರು.

ಲವ್ ಜಿಹಾದ್ ಕೇವಲ ಒಂದು ರಾಜ್ಯ ಒಂದು ಪ್ರದೇಶಕ್ಕೆ ಸೀಮಿತವಾಗಿಲ್ಲ ರಾಷ್ಟ್ರಾದ್ಯಂತ ಆವರಿಸಿದ್ದು ಇದನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಕಠಿಣ ಕಾನೂನು ರಚನೆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಾಗೂ ಉತ್ತರ ಪ್ರದೇಶ  ಹೊರತುಪಡಿಸಿ ಉಳಿದೆಲ್ಲ ರಾಜ್ಯ ಸರ್ಕಾರಗಳು ವಿಫಲವಾಗಿವೆ. ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ ಎಂದರು.

ಹಿಂದಿನ ಲೇಖನತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ: ಜಿಲ್ಲೆಯಲ್ಲಿ ಭುಗಿಲೆದ್ದ ರೈತರ ಆಕ್ರೋಶ
ಮುಂದಿನ ಲೇಖನಮೈಸೂರು: ಹಾಡಹಗಲೇ ಚಿನ್ನದ ವ್ಯಾಪಾರಿ ಮತ್ತು ಪತ್ನಿಗೆ ಚಾಕು ಇರಿದು ಪರಾರಿಯಾದ  ದುಷ್ಕರ್ಮಿಗಳು