ಹುಬ್ಬಳ್ಳಿ: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಸುಮಾರು 40,000 ಮಹಿಳೆಯರು ಕಾಣೆಯಾಗಿದ್ದು 45,000 ಅಪ್ರಾಪ್ತರು ಗರ್ಭಿಣಿಯಾಗಿದ್ದಾರೆ. ಇದೊಂದು ಭಯಾನಕ ಸ್ಥಿತಿಯಾಗಿದ್ದು ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ, ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸೂಕ್ತ ತನಿಖೆ ತನಿಖೆ ನಡೆಸಬೇಕು. ಇಂತಹ ಕೃತ್ಯಗಳ ತಡೆಗೆ ವಿಶೇಷ ಪಡೆ ರಚಿಸಬೇಕೆಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 25 ಸಾವಿರ ಮಕ್ಕಳ ಕಾಣೆಯಾಗಿದ್ದು ಮಹಿಳೆಯರ ನಾಪತ್ತೆಯಿಂದ ಲವ್ ಜಿಹಾದ್ ಉದ್ದೇಶದ ಆತಂಕ ಇದ್ದು ಈ ಬಗ್ಗೆ ವಿಶೇಷ ಗಮನ ಹರಿಸಬೇಕಾಗಿದೆ ಎಂದು ನುಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಒಂದರಲ್ಲೇ ಕಳೆದ 11 ವರ್ಷಗಳಲ್ಲಿ 434 ಮಹಿಳೆಯರು ಕಾಣೆಯಾಗಿದ್ದು, ಸುಮಾರು 452 ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ಕೃತ್ಯಗಳ ಬಗ್ಗೆ ಲಘುವಾಗಿ ಪರಿಗಣಿಸುವುದು ಯಾವುದೇ ಪಕ್ಷದ ಸರ್ಕಾರಕ್ಕೂ ಒಳ್ಳೆಯದಲ್ಲ ಎಂದರು.
ಸೌಜನ್ಯ ಕೊಲೆ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ
ಸೌಜನ್ಯ ಕೊಲೆ ಪ್ರಕರಣ ಅತ್ಯಂತ ಸೂಕ್ಷ್ಮವಾಗಿದ್ದು ತನಿಖೆಯಲ್ಲಿ ಲೋಪ, ಕೇಸನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕುವ ಯತ್ನಗಳು ಸಾಕಷ್ಟು ನಡೆದಿವೆ ಎಂಬುದು ಗೋಚರಿಸುತ್ತಿದೆ ಈ ಬಗ್ಗೆ ಸರಕಾರ ಸಮಗ್ರ ತನಿಖೆಗೆ ಮುಂದಾಗಬೇಕಾಗಿದೆ. ಸೌಜನ್ಯ ಪ್ರಕರಣದಲ್ಲಿ ನ್ಯಾಯ ದೊರಕಿಸಬೇಕೆಂದು ಒತ್ತಾಯಿಸಿ ಮಾಸಾಂತ್ಯಕ್ಕೆ ಹುಬ್ಬಳ್ಳಿಯಿಂದ ಉತ್ತರ ಕರ್ನಾಟಕದಲ್ಲಿ ಹೋರಾಟಕ್ಕೆ ಚಾಲನೆ ನೀಡಲಾಗುತ್ತಿದ್ದು ಸೌಜನ್ಯ ಅವರ ತಾಯಿ ಈ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಲವ್ ಜಿಹಾದ್ ವಿರುದ್ಧ ಧರ್ಮ, ಜಾತಿ ರಹಿತ ಹೋರಾಟ ಆಗಬೇಕಿದೆ
ಮಹಿಳೆಯರ ಮೇಲೆ ದೌರ್ಜನ್ಯ ಲವ್ ಜಿಹಾದ್, ಕಿಡ್ನಾಪ್, ನಾಪತ್ತೆಯಂತಹ ಪ್ರಕರಣಗಳ ಬಗ್ಗೆ ಸಂಘಟಿತ ಹೋರಾಟದ ಅಗತ್ಯವಿದ್ದು ಈ ಬಗ್ಗೆ ನಾನೇ ಖುದ್ದಾಗಿ ಹಿಂದೂಪರ ಸಂಘಟನೆಗಳೆಲ್ಲವನ್ನು ಭೇಟಿಯಾಗಿ ಹೋರಾಟಕ್ಕೆ ಕೈಜೋಡಿಸುವಂತೆ ಮನವಿ ಮಾಡುತ್ತೇನೆ. ಧರ್ಮ, ಜಾತಿ ರಹಿತ ಹೋರಾಟ ಆಗಬೇಕಾಗಿದೆ ಎಂದರು.
ಲವ್ ಜಿಹಾದ್ ಕೇವಲ ಒಂದು ರಾಜ್ಯ ಒಂದು ಪ್ರದೇಶಕ್ಕೆ ಸೀಮಿತವಾಗಿಲ್ಲ ರಾಷ್ಟ್ರಾದ್ಯಂತ ಆವರಿಸಿದ್ದು ಇದನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಕಠಿಣ ಕಾನೂನು ರಚನೆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಾಗೂ ಉತ್ತರ ಪ್ರದೇಶ ಹೊರತುಪಡಿಸಿ ಉಳಿದೆಲ್ಲ ರಾಜ್ಯ ಸರ್ಕಾರಗಳು ವಿಫಲವಾಗಿವೆ. ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ ಎಂದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.