ಹಾಸನ: ಗುಪ್ತಚರ ಮಾಹಿತಿ ಪ್ರಕಾರ ಬಿಜೆಪಿ ಜೊತೆ ಕಾಂಗ್ರೆಸ್ನ 45 ಶಾಸಕರು ಸಂಪರ್ಕದಲ್ಲಿದ್ದಾರೆ. ಅದನ್ನು ತಡೆಯಲು ಸಿಎಂ, ಡಿಸಿಎಂ ಮುಂದಾಗಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಪಕ್ಷದ 40 ರಿಂದ 50 ಶಾಸಕರು ಮತ್ತು ಮುಖಂಡರನ್ನು ಪಕ್ಷಕ್ಕೆ ಕರೆತನ್ನಿ ಅಂತ ಬ್ರೇಕ್ ಫಾಸ್ಟ್ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಸೂಚನೆ ನೀಡಿದೆ ಎಂಬ ಮಾಹಿತಿ ದೊರೆತಿದೆ. 136 ಸ್ಥಾನ ಇದ್ದರೂ ಆಪರೇಷನ್ ಮಾಡಲು ಹೊರಟಿದ್ದೀರಿ. ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಸತ್ತು ಬಿದ್ದಿದೆ ಅದನ್ನು ಮೊದಲು ನೋಡಿಕೊಳ್ಳಿ. ಅದು ಬಿಟ್ಟು ಅವರು ಬರುತ್ತಾರೆ, ಇವರು ಬರುತ್ತಾರೆ ಅಂತ ಏಕೆ ಹೇಳುತ್ತೀರಾ? ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ನಾನು ದುಬೈನಲ್ಲಿದ್ದಾಗ 5 ರಿಂದ 8 ಜನ ಪಕ್ಷ ಬಿಟ್ಟು ಹೋಗುತ್ತಾರೆ ಎಂಬ ಗೊಂದಲ ಸೃಷ್ಟಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ (ನ.08) ಸಭೆ ಕರೆದಿದ್ದೆ. ಸಭೆಯಲ್ಲಿ 19 ಶಾಸಕರ ಪೈಕಿ 18 ಶಾಸಕರು ಭಾಗಿಯಾಗಿದ್ದರು. ಶಾಸಕ ಶರಣಗೌಡ ಕಂದಕೂರ್ ಭಾಗಿಯಾಗಿರಲಿಲ್ಲ. ಕಂದಕೂರ್ ನಮ್ಮ ಮನೆಯ ಮಗ, ಅವರಲ್ಲಿ ಸ್ವಲ್ಪ ಗೊಂದಲ ಇದೆ. ಶರಣಗೌಡ ಕಂದಕೂರ್ ಅವರನ್ನು ಕರೆದು ಮಾತನಾಡುತ್ತೇನೆ. ಶಾಸಕರು ಪಕ್ಷ ಬಿಟ್ಟು ಹೋಗುತ್ತಾರೆಂದು ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ನಮ್ಮ ಶಾಸಕರ ಮೇಲೆ ಯಾವುದೇ ಅನುಮಾನವಿಲ್ಲ. ಕಾಂಗ್ರೆಸ್ ಆಮಿಷಕ್ಕೆ ಒಳಗಾಗಿ ಯಾವ ಶಾಸಕರು ಪಕ್ಷ ಬಿಡುವುದಿಲ್ಲ ಎಂದರು.
136 ಜನ ಶಾಸಕರನ್ನು ಇಟ್ಟುಕೊಂಡು ಯಾಕೆ ಹೀಗೆ ಪರದಾಡುತ್ತಿದ್ದೀರಿ. ನೀವು ಮತ್ತು ನಿಮ್ಮ ಅಧಿಕಾರಿಗಳು ಬಡ ಹೆಣ್ಣುಮಕ್ಕಳ ಹೆಸರಿನಲ್ಲಿ ಟಿಕೆಟ್ ಹರಿದು, ಹಣವನ್ನು ಯಾವ ರಾಜ್ಯಕ್ಕೆ ಹಣ ಸಾಗಿಸುತ್ತಿದ್ದೀರಿ? ಇಂದಿರಾ ಕ್ಯಾಂಟಿನಲ್ಲೂ ಅದೇ ಕತೆ. ಅಲ್ಲೂ ಹಣ ಲೂಟಿ ಹೋಡೆಯುತ್ತಿದ್ದೀರಾ? ನಿಮ್ಮ ಸರ್ಕಾರ ಐದು ವರ್ಷ ಇದ್ದರೇ 10 ಲಕ್ಷ ಕೋಟಿ ರೂ. ಸಾಲ ಆಗುತ್ತದೆ. ಮೊದಲು ರೈತರನ್ನು ಉಳಿಸಿ. ಹಲವಾರು ಕಡೆ ಎರಡು ಗಂಟೆ ಕರೆಂಟ್ ಇಲ್ಲ. ಏಳು ಗಂಟೆ ಕರೆಂಟ್ ಕೋಡುತ್ತೇವೆ ಎಂಬ ನಿಮ್ಮ ಆದೇಶ ಎಸಿ ರೂಮ್ ಗೆ ಸೀಮಿತವಾಗಿದೆ ಎಂದು ಹರಿಹಾಯ್ದರು.
ಬಾಗಲಕೋಟೆಯಲ್ಲಿ ಬೃಹತ್ ಮೊಸಳೆಯ ರಕ್ಷಣೆ
ಡಿಕೆಶಿ ವಿರುದ್ಧ ದೇವರಾಜೇಗೌಡ ಇನ್ನೊಂದು ಬಾಂಬ್…!
ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ
ಅಭಿವೃದ್ಧಿಗೆ ಮತ ನೀಡಿ ಎಂದ ರಶ್ಮಿಕ ಮಂದಣ್ಣ
SSLCಗೆ ಇನ್ನಿರಲ ಗ್ರೇಸ್ ಮಾರ್ಕ್ಸ್
ಕಾಫಿ ನಾಡಿನಲ್ಲಿ ಮಳೆಯ ಅಬ್ಬರ
T20 ವಿಶ್ವಕಪ್ ನಲ್ಲಿ ಕನ್ನಡ ರಾರಾಜಿಸಲಿದೆ.
ಕೆಎಸ್ಆರ್ಟಿಸಿ ಬಸ್ನ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.