ಮನೆ ಅಪರಾಧ 25 ವರ್ಷದ ಯುವತಿ ವಿವಾಹವಾಗಿದ್ದ 45 ವರ್ಷದ ಶಂಕರಣ್ಣ ಆತ್ಮಹತ್ಯೆ

25 ವರ್ಷದ ಯುವತಿ ವಿವಾಹವಾಗಿದ್ದ 45 ವರ್ಷದ ಶಂಕರಣ್ಣ ಆತ್ಮಹತ್ಯೆ

0

ತುಮಕೂರು: ಕೌಟುಂಬಿಕ ಕಲಹದಿಂದ ಬೇಸತ್ತು 5 ತಿಂಗಳ ಹಿಂದಷ್ಟೇ ತನಗಿಂತ ಇಪ್ಪತ್ತು ವರ್ಷ ವಯಸ್ಸಿನ ಚಿಕ್ಕ ಯುವತಿಯನ್ನು ಮದುವೆಯಾಗಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಕ್ಕಿಮರಿ ಪಾಳ್ಯದಲ್ಲಿ ನಡೆದಿದೆ.

ಶಂಕರಪ್ಪ(45) ಮೃತ ವ್ಯಕ್ತಿ. ಶಂಕರಪ್ಪ ತನ್ನ ಗ್ರಾಮದ ಹೊಲವೊಂದರಲ್ಲಿ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. 2021ರ ಅಕ್ಟೋಬರ್‌ನಲ್ಲಿ ಸಂತೆಮಾವತ್ತೂರು ಗ್ರಾಮದ ಮೇಘನಾ ಎಂಬ ಯುವತಿಯನ್ನು ಅಕ್ಕಿಮರಿ ಪಾಳ್ಯದ ಶಂಕರಪ್ಪ ಮದುವೆಯಾಗಿದ್ದರು.

ಈ ಮದುವೆ ಸಾಕಷ್ಟು ಚರ್ಚೆಗೂ ಗ್ರಾಸವಾಗಿತ್ತಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿತ್ತು.

ಇನ್ನೊಂದೆಡೆ ಮೇಘನಾಗೆ ಈ ಹಿಂದೆ ಬೇರೊಬ್ಬರ ಜೊತೆ ಮದುವೆಯಾಗಿತ್ತು. ಕಳೆದ ಎರಡು ವರ್ಷದಿಂದ ಪತಿ ಕಾಣೆಯಾಗಿದ್ದು, ಪತ್ನಿಯನ್ನು ನೋಡಲು ಬಂದಿರಲಿಲ್ಲ. ಇದರಿಂದ ಬೇಸತ್ತ ಮೇಘನಾ ಶಂಕರಣ್ಣ ಅವರನ್ನು ವರಿಸಿದ್ದಳು.

ಆದರೆ, ಅನೇಕ ದಿನಗಳಿಂದ ಅತ್ತೆ ಸೊಸೆ ನಡುವೆ ನಿರಂತರ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಮುಖ್ಯವಾಗಿ ಶಂಕರಣ್ಣ ಅವರ ಹೆಸರಿನಲ್ಲಿ ಇದ್ದ 2.5 ಎಕರೆ ಜಮೀನನ್ನು ಮಾರಾಟ ಮಾಡುವಂತೆ ಮೇಘನಾ ಒತ್ತಾಯಿಸಿದ್ದರು ಎನ್ನಲಾಗಿದೆ. ಆದರೆ, ಇದಕ್ಕೆ ಅತ್ತೆ ಒಪ್ಪಿರಲಿಲ್ಲ. ಇದೇ ಕಾರಣದಿಂದ ಬೇಸತ್ತು ಶಂಕರಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.

ಈ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ನಡುವೆ ಶಂಕರಣ್ಣ ಆತ್ಮಹತ್ಯೆಗೂ ಮೊದಲೇ ಡೆತ್ ನೋಟ್ ಬರೆದಿಟ್ಟಿದ್ದು, ಇದನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹಿಂದಿನ ಲೇಖನಸಾಗರದ ಗಣಪತಿ ಕೆರೆಯಲ್ಲಿ ವೈದ್ಯಾಧಿಕಾರಿ ಶರ್ಮ ಶವ ಪತ್ತೆ
ಮುಂದಿನ ಲೇಖನಹೊಸ ಕಾಮಗಾರಿ ಕೈಗೆತ್ತಿಕೊಳ್ಳುವುದಿಲ್ಲ: ಸಿ ಸಿ ಪಾಟೀಲ್