ಮನೆ ರಾಷ್ಟ್ರೀಯ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ವಿಷಾನಿಲ ಸೇವಿಸಿ 5 ಮಂದಿ ಕಾರ್ಮಿಕ ಸಾವು

ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ವಿಷಾನಿಲ ಸೇವಿಸಿ 5 ಮಂದಿ ಕಾರ್ಮಿಕ ಸಾವು

0

ಮಹಾರಾಷ್ಟ್ರ: ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿರುವ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ವಿಷಾನಿಲ ಸೇವಿಸಿದ ಪರಿಣಾಮ 5 ಮಂದಿ ಕಾರ್ಮಿಕರಯ ಮೃತಪಟ್ಟಿದ್ದಾರೆ.

Join Our Whatsapp Group

ಗುರವಾರ ಮಧ್ಯಾಹ್ನ ಸೋನಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಭೌಚಾ ತಾಂಡಾ ಪ್ರದೇಶದಲ್ಲಿರವ ತೋಟದಲ್ಲಿರುವ  ಸೆಪ್ಟಿಕ್ ಟ್ಯಾಂಕ್ ನ್ನು ಸ್ವಚ್ಛಗೊಳಿಸಲು 5 ಕಾರ್ಮಿಕರು ಇಳಿದಿದ್ದಾರೆ. ಈ ವೇಳೆ ವಿಷಾನಿಲದಿಂದ ಕಾರ್ಮಿಕರಿಗೆ ಉಸಿರಾಟ ತೊಂದರೆ ಉಂಟಾಗಿದೆ. ತೀವ್ರ ಅಸ್ವಸ್ಥಗೊಂಡ ಕಾರ್ಮಿಕರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಇದರಲ್ಲಿ ಐವರು ಕಾರ್ಮಿಕರು ಮೃತಪಟ್ಟಿದ್ದು, ಇನ್ನೊಬ್ಬ ಕಾರ್ಮಿಕನ ಸ್ಥಿತಿ ಗಂಭೀರವಾಗಿದೆ ಎಂದು ವರದಿ ತಿಳಿಸಿದೆ.

ಸೋನ್ಪೇಟ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವಿನ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಹಿಂದಿನ ಲೇಖನಹಾಸನದಲ್ಲಿ ಜೆಡಿಎಸ್, ಚಳ್ಳಕೆರೆಯಲ್ಲಿ ಕಾಂಗ್ರೆಸ್, ಯಲ್ಲಾಪುರದಲ್ಲಿ ಬಿಜೆಪಿ ಗೆಲುವು
ಮುಂದಿನ ಲೇಖನಸೊರಬದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಗೆಲುವು