ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ವಿದ್ಯಾರಣ್ಯಪುರಂನ ಸೂಯೆಜ್ ಫಾರಂನಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸಂಗ್ರಹವಾಗಿರುವ ತ್ಯಾಜ್ಯವನ್ನು ತೆರವುಗೊಳಿಸಲು ₹ 57 ಕೋಟಿ ಮೊತ್ತದ ಯೋಜನೆ ರೂಪಿಸಲಾಗಿದೆ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು.
ನಗರಪಾಲಿಕೆಯಲ್ಲಿ ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸ್ವಚ್ಛ ಭಾರತ ಅಭಿಯಾನದಲ್ಲಿ ಅನುದಾನ ದೊರೆಯಲಿದೆ. ಹೊಸದಾಗಿ ಡಿಪಿಆರ್ ತಯಾರಿಸಲಾಗಿದೆ. ಟೆಂಡರ್ ಪಡೆಯುವ ಕಂಪನಿಗೆ, ತ್ಯಾಜ್ಯ ತೆರವುಗೊಳಿಸಲು ಟನ್’ಗೆ ಇಂತಿಷ್ಟೆಂದು ಹಣವನ್ನು ಕೊಡಬೇಕಾಗುತ್ತದೆ ಎಂದರು.
ಚಾಮುಂಡಿ ಬೆಟ್ಟಕ್ಕೆ ಪರ್ಯಾಯವಾಗಿ ಕಸದ ಗುಡ್ಡೆ ಬೆಳೆಯುತ್ತಲೇ ಇದೆ. ದಿನೇ ದಿನೇ ಸಂಗ್ರಹ ಪ್ರಮಾಣ ಏರುತ್ತಲೇ ಇದೆ. ಹೀಗಾಗಿ, ತ್ಯಾಜ್ಯವನ್ನು ತೆರವುಗೊಳಿಸಬೇಕಾಗಿದೆ ಎಂದು ಹೇಳಿದರು.
ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ ರೆಡ್ಡಿ ಮಾತನಾಡಿ, ಕಾರ್ಯಾದೇಶ ನೀಡಿದ ಮೇಲೆ 18 ತಿಂಗಳೊಳಗೆ ತ್ಯಾಜ್ಯವನ್ನು ತೆರವುಗೊಳಿಸಬೇಕಾಗುತ್ತದೆ. ನಗರದಲ್ಲಿ ನಿತ್ಯ 550 ಟನ್ನಿಂದ 600 ಟನ್ಗಳಷ್ಟು ತ್ಯಾಜ್ಯ ಉತ್ಪಾದನೆ ಆಗುತ್ತಿದೆ. ಅಷ್ಟನ್ನೂ ಸಂಸ್ಕರಣೆ ಮಾಡುವುದು ಸದ್ಯಕ್ಕೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸಂಗ್ರಹ ಪ್ರಮಾಣ ಜಾಸ್ತಿಯಾಗಿದೆ. ಸೂಯೆಜ್ ಫಾರಂ ಘಟಕದಲ್ಲಿ ಈಗಾಗಲೇ 6.50 ಲಕ್ಷ ಟನ್ ತ್ಯಾಜ್ಯ ಇದೆ ಎಂದು ಮಾಹಿತಿ ನೀಡಿದರು.
ಟೆಂಡರ್ ಪಡೆಯುವವರು, ತ್ಯಾಜ್ಯವನ್ನು ಗೊಬ್ಬರ, ಸಿಮೆಂಟ್, ಡಾಂಬರು ತಯಾರಿಕೆ ಮೊದಲಾದವುಗಳಿಗೆ ಬಳಸುತ್ತಾರೆ. ಸಂಗ್ರಹವಾಗಿರುವ ತ್ಯಾಜ್ಯದಲ್ಲಿ ಶೇ 20ರಷ್ಟು ಪ್ಲಾಸ್ಟಿಕ್ ಕಸವೇ ಇದೆ ಎಂದು ಹೇಳಿದರು.