ಮನೆ ಸುದ್ದಿ ಜಾಲ ಅಗ್ನಿ ದುರಂತ : ಏಳು ಮಂದಿ ದುರ್ಮರಣ

ಅಗ್ನಿ ದುರಂತ : ಏಳು ಮಂದಿ ದುರ್ಮರಣ

0

ನವದೆಹಲಿ : ಗುಡಿಸಲುಗಳಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಏಳು ಮಂದಿ ಮೃತಪಟ್ಟಿರುವ ಘಟನೆ ದೆಹಲಿಯ ಗೋಕುಲಪುರಿ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ದೆಹಲಿ ಅಗ್ನಿ ಶಾಮಕ ಇಲಾಖೆ ಮಾಹಿತಿ ನೀಡಿದೆ.

ಮೇಲ್ನೋಟಕ್ಕೆ ಸುಮಾರು 60 ಗುಡಿಸಲುಗಳಲ್ಲಿ ಬೆಂಕಿ ಕಾಣಿಸಿತ್ತು. ವಿಚಾರ ತಿಳಿದು 13 ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ನಂದಿಸಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸದ್ಯಕ್ಕೆ ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ದೆಹಲಿ ಪೊಲೀಸ್ ತಂಡ ಈ ಬಗ್ಗೆ ತನಿಖೆ ನಡೆಸುತ್ತಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಹಿಂದಿನ ಲೇಖನಚಾರ್‍ ಧಾಮ್ ಯೋಜನೆ ಉನ್ನತಾಧಿಕಾರ ಸಮಿತಿ ಅಧ್ಯಕ್ಷರಾಗಿ ನ್ಯಾ.ಎ.ಕೆ.ಸಿಕ್ರಿ ನೇಮಕ
ಮುಂದಿನ ಲೇಖನಜಮ್ಮು ಮತ್ತು ಕಾಶ್ಮೀರದಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಸೇನೆ