ಮನೆ ಅಪರಾಧ ದೇವಸ್ಥಾನಕ್ಕೆ ಹೋಗಿ ಬರುವಷ್ಟರಲ್ಲಿ ಮನೆಯಲ್ಲಿದ್ದ 8.50 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ದೇವಸ್ಥಾನಕ್ಕೆ ಹೋಗಿ ಬರುವಷ್ಟರಲ್ಲಿ ಮನೆಯಲ್ಲಿದ್ದ 8.50 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

0
ಸಾಂದರ್ಭಿಕ ಚಿತ್ರ

ಹಿರಿಯಡ್ಕ: ಮನೆಗೆ ಬೀಗ ಹಾಕಿ ದೇವಸ್ಥಾನಕ್ಕೆ ಹೋಗಿ ಬರುವಷ್ಟರಲ್ಲಿ ಮನೆಯಲ್ಲಿದ್ದ 8.50 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನವಾಗಿರುವ ಘಟನೆ ಸೋಮವಾರ ಮಧ್ಯಾಹ್ನ ಹಿರಿಯಡ್ಕ ಸಮೀಪದ ಓಂತಿಬೆಟ್ಟುವಿನಲ್ಲಿ ನಡೆದಿದೆ.

Join Our Whatsapp Group

ಅಂಜಾರು ಗ್ರಾಮದ ಓಂತಿಬೆಟ್ಟು ಶಾಲೆಯ ಬಳಿಯ ನಿವಾಸಿಯಾಗಿರುವ ಶಂಕರ ಟಿ. ಅವರ ಮನೆಯಲ್ಲಿ ಘಟನೆ ನಡೆದಿದ್ದು, ಸೋಮವಾರ ಮಧ್ಯಾಹ್ನ 12 ಗಂಟೆಯ ಹೊತ್ತಿಗೆ ಪತ್ನಿಯ ಜೊತೆ ಹಿರಿಯಡ್ಕ ದೇವಸ್ಥಾನಕ್ಕೆ ಹೋಗಿ 1 ಗಂಟೆಯ ವೇಳೆಗೆ ಮನೆಗೆ ಬಂದು ನೋಡಿದಾಗ ಮನೆಯ ಹಿಂದಿನ ಬಾಗಿಲಿನ ಬೀಗ ಮುರಿದಿರುವುದು ಬೆಳಕಿಗೆ ಬಂದಿದೆ. ಬಳಿಕ ಪರಿಶೀಲನೆ ನಡೆಸಿದಾಗ ಚಿನ್ನಾಭರಣ ಹಾಗೂ ನಗದು ಕಳ್ಳತನವಾಗಿರುವುದು ಗೊತ್ತಾಗಿದೆ.

ಕಳವು ಮಾಡಿದ ಚಿನ್ನಾಭರಣಗಳ ಒಟ್ಟು ತೂಕ 242 ಗ್ರಾಂ ಆಗಿದ್ದು, ಅದರ ಒಟ್ಟು ಮೌಲ್ಯ ರೂ. 8,50,000/-, ಜೊತೆಗೆ 40,000 ಮೌಲ್ಯದ ಕ್ಯಾಮೆರಾ, 20 ಸಾವಿರ ನಗದು ಕಳ್ಳತನವಾಗಿದೆ.

ಘಟನೆ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.