ಬೆಂಗಳೂರು: ರಾಜ್ಯಕ್ಕೆ ಮುಂಗಾರು ಪ್ರವೇಶವಾದ ಕೇವಲ ಹತ್ತು ದಿನಗಳಲ್ಲಿ ವಾಡಿಕೆಗಿಂತ ಶೇ 80ರಷ್ಟು ಹೆಚ್ಚುವರಿ ಮಳೆಯಾಗಿದೆ.
ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಜೂನ್ 1 ರಿಂದ ಸಾಮಾನ್ಯ ಮಳೆಯ ಪ್ರಮಾಣ 47.6 ಮಿಮೀಗೆ ಬದಲಾಗಿ ರಾಜ್ಯದಲ್ಲಿ 85.6 ಮಿಮೀ ಮಳೆಯಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ದಾಖಲಾಗಿದೆ.
ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮಾತ್ರ ಅನುಕ್ರಮವಾಗಿ ಶೇ 26, ಶೇ 3 ಮತ್ತು ಶೇ 30 ರಷ್ಟು ಕೊರತೆ ದಾಖಲಾಗಿದೆ. ಒಟ್ಟಾರೆಯಾಗಿ ಕರಾವಳಿ ಕರ್ನಾಟಕದಲ್ಲಿ ಶೇ 25ರಷ್ಟು ಅಧಿಕ ಮಳೆ ದಾಖಲಾಗಿದೆ. 155.6 ಮಿಮೀ ವಾಡಿಕೆ ಮಳೆಗೆ ವಿರುದ್ಧವಾಗಿ, ಈ ಪ್ರದೇಶದಲ್ಲಿ 192.4 ಮಿಮೀ ಮಳೆಯಾಗಿದೆ.
ಉತ್ತರ ಒಳನಾಡಿನಲ್ಲಿ ಶೇ 140 ರಷ್ಟು ಅಧಿಕ ಮಳೆ ದಾಖಲಾಗಿದೆ. ಈ ಪ್ರದೇಶದಲ್ಲಿ ವಾಡಿಕೆಯ 33 ಮಿಮೀ ಮಳೆಗೆ ಬದಲಾಗಿ 79.3 ಮಿಮೀ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಶೇ 82 ರಷ್ಟು ಅಧಿಕ ಮಳೆ ದಾಖಲಾಗಿದೆ. ಇಲ್ಲಿ ವಾಡಿಕೆಯ 38.5 ಮಿಮೀಗೆ ಬದಲಾಗಿ 70.2 ಮಿಮೀ ಮಳೆಯಾಗಿದೆ.
ವಿಜಯಪುರದಲ್ಲಿ ಗರಿಷ್ಠ ಶೇ 329 ರಷ್ಟು ಹೆಚ್ಚು ಮಳೆಯಾಗಿದೆ. ನಂತರ ಬೆಂಗಳೂರು ಗ್ರಾಮಾಂತರದಲ್ಲಿ ಶೇ 272 ರಷ್ಟು ಅಧಿಕ ಮಳೆ ದಾಖಲಾಗಿದೆ. ರಾಮನಗರ ಮತ್ತು ವಿಜಯನಗರದಲ್ಲಿ ಶೇ 222ರಷ್ಟು ಅಧಿಕ ಮಳೆ ದಾಖಲಾಗಿದೆ. ಉಡುಪಿಯಲ್ಲಿ ಶೇ 5ರಷ್ಟು ಅಧಿಕ ಮಳೆ ದಾಖಲಾಗಿದೆ.
ಬೆಂಗಳೂರು ನಗರ ಪ್ರದೇಶದಲ್ಲಿ ಶೇ 145ರಷ್ಟು ಅಧಿಕ ಮಳೆ ದಾಖಲಾಗಿದೆ. ಜೂನ್ 1-10ರವರೆಗೆ ವಾಡಿಕೆಯ 37 ಮಿಮೀ ಮಳೆಗೆ ಬದಲಾಗಿ 90.6 ಮಿಮೀ ಮಳೆಯಾಗಿದೆ.
2023 ರಲ್ಲಿ ಜೂನ್ 1-14 ರ ಅವಧಿಯಲ್ಲಿ ಶೇ 66 ರಷ್ಟು ಮಳೆ ಕೊರತೆಯಾಗಿತ್ತು. ಈ ವರ್ಷ ಮುಂಗಾರು ಮಳೆ ಚೆನ್ನಾಗಿ ಸುರಿಯುತ್ತಿದೆ. ಆದರೆ, ಮೂರು ದಿನಗಳ ನಂತರ, ಮಳೆ ಕಡಿಮೆಯಾಗಬಹುದು ಎಂದು ಹವಾಮಾನ ಇಲಾಖೆ ತಜ್ಞರು ಸುಳಿವು ನೀಡಿದ್ದಾರೆ.
ಸ್ಟೇಜ್ ಮೇಲೆ ಯುವ'ನಾ ಚಂಗಲಾಟ….!!
ವಸ್ತು ಪ್ರದರ್ಶನ ಪ್ರಾಧಿಕಾರದಲ್ಲಿ ರಕ್ತ ಪಿಪಾಸುಗಳು…
ಮಂತ್ರಿಯಾಗಿ ಪವನ್ ಕಲ್ಯಾಣ ಪ್ರಮಾಣವಚನ
ಮಾಧ್ಯಮ ರಂಗದ ಭೀಷ್ಮ ರಾಮೋಜಿ ರಾವ್ ನಿಧನ.!
ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪೈ.ಲಿ.ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆರ್ಜಿ ಆಹ್ವಾನ
ಡಿವೋಸ್ ಮೊರೆ ಹೋದ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ!
PM ಮೋದಿಯವರು ಸಂವಿಧಾನ್ ಸದನ್ಗೆ ಆಗಮಿಸುತ್ತಿದ್ದಂತೆ ಮೋದಿ ಮೋದಿ ಘೋಷಣೆ
ಅವಕಾಶವಾದಿ ರಾಜಕಾರಣ ಮಾಡುವವರಿಗೆ ಜನ ಬುದ್ದಿ ಕಲಿಸಿದ್ದಾರೆ – ಸಾರಾ ಮಹೇಶ್
ಆದಾಯ ತೆರಿಗೆ ಇನ್ಸ್ಪೆಕ್ಟರ್, ಅಸಿಸ್ಟೆಂಟ್ ಹುದ್ದೆ ನೇಮಕಾತಿ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.