ಮನೆ ಅಪರಾಧ ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ 9 ಕಡೆ ಎಸಿಬಿ ದಾಳಿ

ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ 9 ಕಡೆ ಎಸಿಬಿ ದಾಳಿ

0

ಬೆಂಗಳೂರು: ಬಿಡಿಎ ಅಧಿಕಾರಿಗಳೊಂದಿಗೆ ಸೇರಿ ಭ್ರಷ್ಟಾಚಾರ, ಅವ್ಯವಹಾರದಲ್ಲಿ ತೊಡಗಿದ ಆರೋಪದ ಹಿನ್ನೆಲೆಯಲ್ಲಿ ಮಂಗಳವಾರ ನಗರದ ಬಿಡಿಎ ಮಧ್ಯವರ್ತಿಗಳು, ಏಜೆಂಟ್ ಗಳ ಮನೆಗಳ ಮೇಲೆ ಎಸಿಬಿ ದಾಳಿ ನಡೆಸಿದೆ.

ಬೆಂಗಳೂರಿನಲ್ಲಿ ಏಕಕಾಲದಲ್ಲಿ ಎಸಿಬಿ ಎಸ್’ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ, 9 ಕಡೆ ದಾಳಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಚಾಮರಾಜಪೇಟೆಯ ಬಿ.ಎನ್.ರಘು, ಆರ್’ಟಿ ನಗರ ಬಳಿಯ ಮನೋರಾಯನಪಾಳ್ಯದ ಮೋಹನ್, ದೊಮ್ಮಲೂರಿನ ಮನೋಜ್, ಆರ್.ಆರ್.ನಗರದ ತೇಜು, ಮಲ್ಲತ್ತಹಳ್ಳಿಯ ಮುನಿರತ್ನ ಅಲಿಯಾಸ್ ರತ್ನವೇಲು, ಮುದ್ದಿನಪಾಳ್ಯದ ಅಶ್ವತ್ಥ್ ಹಾಗೂ ಚಿಕ್ಕಹನುಮಯ್ಯ, ಚಾಮುಂಡೇಶ್ವರಿನಗರದ ರಾಮು ಮತ್ತು ಚಾಮುಂಡೇಶ್ವರಿ ನಗರ, ಬಿಡಿಎ ಲೇಔಟ್​ನ ಲಕ್ಷ್ಮಣ ಮೇಲೆ ಎಸಿಬಿ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ.

ಈ ಹಿಂದೆ ಬಿಡಿಎ ಕಚೇರಿಗಳ ಮೇಲೆ ದಾಳಿಮಾಡಿದ್ದ ಎಸಿಬಿ ಅಧಿಕಾರಿಗಳು, ಹಲವು ಅಕ್ರಮಗಳನ್ನು ಪತ್ತೆಮಾಡಿದ್ದರು. ಆ ಪ್ರಕರಣದ ತನಿಖೆಯಲ್ಲಿ ಖಾಸಗಿ ಮಧ್ಯವರ್ತಿಗಳ ಪಾತ್ರದ ಕುರಿತು ಮಾಹಿತಿ ಲಭ್ಯವಾಗಿತ್ತು. ಅದನ್ನು ಆಧರಿಸಿ ಪ್ರತ್ಯೇಕ ಪ್ರಕರಣ ದಾಖಲಿಸಿರುವ ತನಿಖಾ ಸಂಸ್ಥೆ, ಕಾರ್ಯಾಚರಣೆ ನಡೆಸುತ್ತಿದೆ.

ಹಿಂದಿನ ಲೇಖನಕೇಂದ್ರ ಹಿಂಪಡೆದ 3 ಕೃಷಿ ಕಾಯ್ದೆಗಳು ರೈತರಿಗೆ ಪೂರಕವಾಗಿದ್ದವು:  ಸುಪ್ರೀಂ ಕೋರ್ಟ್ ಸಮಿತಿ
ಮುಂದಿನ ಲೇಖನಬೆಂಗಳೂರು ವಿವಿ ಕುಲಪತಿ ಹುದ್ದೆ ರದ್ದುಗೊಳಿಸಿ ಹೈಕೋರ್ಟ್ ಆದೇಶ: ಸುಪ್ರೀಂ ಮೊರೆ