ಮನೆ ಮನರಂಜನೆ ಸ್ಯಾಂಡಲ್ ವುಡ್ ಹಿರಿಯ ನಟ ಉದಯ್ ಹುತ್ತಿನಗದ್ದೆ ನಿಧನ

ಸ್ಯಾಂಡಲ್ ವುಡ್ ಹಿರಿಯ ನಟ ಉದಯ್ ಹುತ್ತಿನಗದ್ದೆ ನಿಧನ

0

ಬೆಂಗಳೂರು(Bengaluru): ಕನ್ನಡ ಚಿತ್ರರಂಗದ ಹಿರಿಯ ನಟ ಉದಯ್ ಹುತ್ತಿನಗದ್ದೆ ಗುರುವಾರ ಸಂಜೆ ನಿಧನರಾಗಿದ್ದಾರೆ.

ಉದಯ್ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

1987ರಲ್ಲಿ `ಆರಂಭ’ ಸಿನಿಮಾದಲ್ಲಿ ನಾಯಕ ನಟನಾಗಿ ಮಿಂಚಿದ್ದ ಇವರು, ಜಯಭೇರಿ, ಅಮೃತ ಬಿಂದು, ಕರ್ಮ, ಉಂಡುಹೋದ ಕೊಂಡಹೋದ ಸೇರಿದಂತೆ ಹಲವು ಚಲನಚಿತ್ರಗಳಲ್ಲಿ ಅಭಿನಯಿಸಿದ್ದರು.

ಡಾ. ರಾಜ್ ಕುಮಾರ್ ಅಭಿನಯದ ದೇವತಾ ಮನುಷ್ಯ ಸಿನಿಮಾದಲ್ಲಿ ಸುಧಾರಾಣಿ ಜೋಡಿಯಾಗಿ ಉದಯ್ ಹುತ್ತಿನಗದ್ದೆ ನಟಿಸಿದರು. ಲಲಿತಾಂಜಲಿ ಎಂಬ ಕಿರುತೆರೆ ನಟಿಯನ್ನು ಮದುವೆಯಾದ ಇವರು, ಮಾಗಡಿ ರಸ್ತೆಯಲ್ಲಿ ವಾಸವಾಗಿದ್ದರು. ರಾಜಾಜಿನಗರದ ಬಾಷ್ಯಂ ಸರ್ಕಲ್‌ನಲ್ಲಿ ಉದಯ್ ಹುತ್ತಿನಗದ್ದೆ ಫೋಟೋಗ್ರಫಿ ಸ್ಟುಡಿಯೋ ನಡೆಸುತ್ತಿದ್ದರು.