ಮನೆ ಅಪರಾಧ ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

0

ಚಿಂತಾಮಣಿ (ಚಿಕ್ಕಬಳ್ಳಾಪುರ): ಕೆ.ಎಸ್.ಆರ್.ಟಿ.ಸಿ. ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಮೃತಪಟ್ಟ ಘಟನೆ ಶಿಡ್ಲಘಟ್ಟ ತಾಲೂಕಿನಲ್ಲಿ ನ.27ರ ಬುಧವಾರ ನಡೆದಿದೆ.

Join Our Whatsapp Group

ಬೊಮ್ಮಸಂದ್ರ ನಿವಾಸಿ ವೆಂಕಟೇಶ್ ಹಾಗೂ ಸರಸ್ವತಮ್ಮ ಮೃತ ದಂಪತಿಗಳು.

ಚಿಂತಾಮಣಿ ತಾಲೂಕಿನ ನಾರಾಯಣಳ್ಳಿ ಗ್ರಾಮಕ್ಕೆ ತೆರಳುವಾಗ ನಗರದ ಆದರ್ಶ ಟಾಕೀಸ್ ಬಳಿ ಬೆಳಗ್ಗೆ ಈ ಅಪಘಾತ ಸಂಭವಿಸಿದೆ.

ಅಪಘಾತದ ಪರಿಣಾಮ ವೆಂಕಟೇಶ್ ಅವರ ತಲೆ ದೇಹದಿಂದ ಸಂಪೂರ್ಣ ಬೇರ್ಪಟ್ಟಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ಅತಿವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಸ್ಥಳಕ್ಕೆ ಚಿಂತಾಮಣಿ ನಗರ ಶಾಣೆ ಪೊಲೀಸರು ಭೇಟಿ ನೀಡಿದ್ದಾರೆ.