ಮನೆ ಅಪರಾಧ ಬಸ್, ಟೆಂಪೋ ನಡುವೆ ಅಪಘಾತ: ಏಳು ಜನರು ಸಜೀವ ದಹನ ಶಂಕೆ

ಬಸ್, ಟೆಂಪೋ ನಡುವೆ ಅಪಘಾತ: ಏಳು ಜನರು ಸಜೀವ ದಹನ ಶಂಕೆ

0

ಕಮಲಾಪುರ(Kamalapura) (ಕಲಬುರಗಿ ಜಿಲ್ಲೆ): ಬಸ್ ಮತ್ತು ಟೆಂಪೊ ನಡುವೆ ಸಂಭವಿಸಿದ ಅಪಘಾತದಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ಪಟ್ಟಣದ ಹೊರವಲಯದಲ್ಲಿರುವ ಚಾರ್ ಕಮಾನ್ ಬಳಿ ನಡೆದಿದೆ.

ಆರೆಂಜ್ ಸಂಸ್ಥೆಯ ಬಸ್ ಇದಾಗಿದ್ದು, ಎಳು ಜನರು ಸಜೀವ ದಹನವಾಗಿರುವ ಅನುಮಾನ ವ್ಯಕ್ತವಾಗಿದೆ.

ತೆಲಂಗಾಣದ ಹೈದರಬಾದ್‌ನಿಂದ ಗೋವಾಕ್ಕೆ ಮೂರು ಕುಟುಂಬಗಳ 29 ಜನ ಪ್ರವಾಸಕ್ಕೆ ತೆರಳಿದ್ದರು. ಅಲ್ಲಿಂದ ಮರಳುವಾಗ ಅಪಘಾತ ಸಂಭವಿಸಿದೆ.22 ಜನರನ್ನು ಬಸ್‌ನಿಂದ ಹೊರ ಬಂದಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಟೆಂಪೊ ಚಾಲಕನ ಎರಡೂ ಕಾಲುಗಳು ತುಂಡಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡವರನ್ನು ಕಲಬುರಗಿಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಹಲವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರು ಹೈದರಾಬಾದ್ ನಿವಾಸಿಗಳು ಎಂದು ಗೊತ್ತಾಗಿದೆ.