ಮನೆ ರಾಜ್ಯ ಕಮಲಾಪುರ ಅಪಘಾತ: ಮಾಜಿ ಸಿಎಂ ಹೆಚ್ ಡಿಕೆ ಸಂತಾಪ

ಕಮಲಾಪುರ ಅಪಘಾತ: ಮಾಜಿ ಸಿಎಂ ಹೆಚ್ ಡಿಕೆ ಸಂತಾಪ

0

ಬೆಂಗಳೂರು(Bengaluru): ಕಲಬುರಗಿ ಜಿಲ್ಲೆಯ ಕಮಲಾಪುರ ಬಳಿ ಸಂಭವಿಸಿದ ಭೀಕರ ಅಪಘಾತಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು,  ಭೀಕರ ಬಸ್​ ದುರಂತದಲ್ಲಿಇಬ್ಬರು ಮಕ್ಕಳು ಸೇರಿ 7 ಜನ ಸಜೀವ ದಹನವಾಗಿರುವ ಸುದ್ದಿ ಕೇಳಿ ದಿಗ್ಭ್ರಮೆ ಉಂಟಾಯಿತು. ಗಾಯಾಳುಗಳೆಲ್ಲ ಶೀಘ್ರ ಗುಣಮುಖರಾಗಲಿ ಎಂದಿದ್ದಾರೆ.

ಚಾಲಕನ ಅಜಾಗರೂಕತೆ ಮತ್ತು ಅತಿ ವೇಗದಿಂದ ಈ ದುರಂತ ಘಟಿಸಿದೆ ಎಂಬ ಮಾಹಿತಿ ಬಂದಿದೆ. ಇದು ತೀವ್ರ ಕಳವಳಕಾರಿ. ಚಾಲಕನ ನಿರ್ಲಕ್ಷ್ಯದಿಂದ ಅಮೂಲ್ಯ ಜೀವಗಳು ಬಲಿಯಾಗಿವೆ ಎಂದಿದ್ದಾರೆ.

ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.