ಮನೆ ರಾಜಕೀಯ ಸಿದ್ದರಾಮಯ್ಯ ಅವರ ವಿರುದ್ಧ ಹರಿಹಾಯ್ದ ಸಿಎಂ ಬೊಮ್ಮಾಯಿ

ಸಿದ್ದರಾಮಯ್ಯ ಅವರ ವಿರುದ್ಧ ಹರಿಹಾಯ್ದ ಸಿಎಂ ಬೊಮ್ಮಾಯಿ

0

ಹುಬ್ಬಳ್ಳಿ (Hubballi): ಆರ್ ಎಸ್ ಎಸ್ ವಿರುದ್ಧ ಟೀಕೆ ಮಾಡುವ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಸೇರಿದಂತೆ ಕಾಂಗ್ರೆಸ್ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ (Basavaraja Bommai) ತಿರುಗೇಟು ನೀಡಿದ್ದಾರೆ.

ಆರ್ ಎಸ್ಎಸ್ ಚಡ್ಡಿಯನ್ನು ಸುಡುತ್ತೇವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಸಿದ್ದರಾಮಯ್ಯ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ಹರಿಹಾಯ್ದಿದ್ದಾರೆ. ಇಂದು ಕಾಂಗ್ರೆಸ್ ಹಲವು ರಾಜ್ಯಗಳಲ್ಲಿ ಸೋತರೂ ಕೂಡ ಪಾಠ ಕಲಿತಿಲ್ಲ. ಆರ್ ಎಸ್ ಎಸ್ ಬಗ್ಗೆ ಹೀಗೆ ಮಾತನಾಡುತ್ತಾ ಹೋದರೆ ಸರಿಯಾದ ಅನುಭವ ಅವರಿಗಾಗಲಿದೆ ಎಂದರು. 

ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಆರ್ ಎಸ್ಎಸ್ ಕಳೆದ 75 ವರ್ಷಗಳಿಂದ ದೇಶಸೇವೆ ಮಾಡಿಕೊಂಡು ಬಂದಿದೆ. ದೇಶ ಸೇವೆಗೆ, ರಾಷ್ಟ್ರನಿರ್ಮಾಣದಲ್ಲಿ ದೇಶಭಕ್ತಿಯನ್ನು ಜನರಲ್ಲಿ ಮೂಡಿಸುವ ಸಂಸ್ಥೆ ಆರ್ ಎಸ್ಎಸ್. ಬೇರೆ ಬೇರೆ ರಾಜ್ಯಗಳಲ್ಲಿ ಆರ್ ಎಸ್ ಎಸ್ ಉತ್ತಮ ಕೆಲಸ ಮಾಡಿಕೊಂಡು ಬಂದಿದೆ. ಆದರೆ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನವರು ರಾಜಕೀಯ ಲಾಭಕ್ಕಾಗಿ ಆರ್ ಎಸ್ ಎಸ್ ಬಗ್ಗೆ ಅಪಪ್ರಚಾರ ಮಾಡುತ್ತಾ ಬಂದಿದ್ದಾರೆ ಎಂದು ಆರೋಪಿಸಿದರು.

ಜನತೆಗೆ ಆರ್ ಎಸ್ ಎಸ್ ಎಂದರೆ ಏನು ಎಂದು ಗೊತ್ತಿದೆ. ಕಾಂಗ್ರೆಸ್ ನವರು ಹೀಗೆ ಮಾತನಾಡುತ್ತಾ ಹಲವು ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದ್ದಾರೆ. ಇದೀಗ ಕರ್ನಾಟಕದಲ್ಲಿ ಕೂಡ ಕಳೆದುಕೊಳ್ಳುತ್ತಾರೆ. ಆರ್ ಎಸ್ ಎಸ್ ವಿರುದ್ಧ ಕಾಂಗ್ರೆಸ್ ನವರು ಹೀಗೆ ಮಾತನಾಡುತ್ತಾ ಹೋದರೆ ತಕ್ಕ ಪಾಠ ಕಲಿಸುತ್ತಾರೆ ಎಂದರು.