ಧಾರವಾಡ: ದರೋಡೆಕೋರ ನಟೋರಿಯಸ್ ಕ್ರಿಮಿನಲ್ ನ 2 ಕಾಲಿಗೆ ವಿದ್ಯಾಗಿರಿ ಪೊಲೀಸರು ಪೈರಿಂಗ್ ಮಾಡಿದ್ದಾರೆ. ಇದರಲ್ಲಿ ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ.
ಧಾರವಾಡದ ನವಲೂರಿನ ಮನೆಯೊಂದಕ್ಕೆ ಆರೋಪಿ ಪಾಲಾ ವೆಂಕಟೇಶ್ವರರಾವ್ ಸೇರಿದಂತೆ ಉಳಿದ ದರೋಡೆಕೋರರು ಕನ್ನ ಹಾಕಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವೆಂಕಟೇಶ್ವರರಾವ್ ನನ್ನು ಬಂಧಿಸಿ ಹೆಚ್ಚಿನ ವಿಚಾರಣೆ ಕರೆದುಕೊಂಡು ಹೋಗುತ್ತಿದ್ದಾಗ ಪೊಲೀಸರ ಮೇಲೆ ದಾಳಿ ಮಾಡಿದ್ದಾನೆ. ಈ ಸಂದರ್ಭದಲ್ಲಿ ಆತನ ಕಾಲಿನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ಆರೋಪಿ ದಾಳಿಯಿಂದ ಪಿಎಸ್ಐ ಸೇರಿ ಇಬ್ಬರು ಸಿಬ್ಬಂದಿಗೆ ಗಾಯಗಳಾಗಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ 80ಕ್ಕೂ ಹೆಚ್ಚು ಕಳ್ಳತನದಲ್ಲಿ ಭಾಗಿಯಾಗಿದ್ದ. ಮೂಲತಃ ಆಂಧ್ರಪ್ರದೇಶದವನಾಗಿದ್ದು, ಸುಮಾರು ಐದು ರಾಜ್ಯಗಳ ಪೊಲೀಸರಿಗೆ ಬೇಕಾಗಿದ್ದ.













