ಮನೆ ಕಾನೂನು ಮಂಡ್ಯ: ಮೂವರು ಪೊಲೀಸರು ಅಮಾನತು

ಮಂಡ್ಯ: ಮೂವರು ಪೊಲೀಸರು ಅಮಾನತು

0

ಮಂಡ್ಯ: ಹೊರ ರಾಜ್ಯಗಳಿಂದ ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಬೃಂದಾವನ ಗಾರ್ಡನ್ ನೋಡಲು ಬರುತ್ತಿದ್ದ ಪ್ರವಾಸಿಗರ ವಾಹನಗಳನ್ನು ಗುರಿಯಾಗಿಸಿಕೊಂಡು ಅವರಿಂದ ಹಣವನ್ನು ವಸೂಲಿ ಮಾಡುತ್ತಿದ್ದ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

Join Our Whatsapp Group

ಈ ಬಗ್ಗೆ ವಿಡಿಯೋ ಸಾಕ್ಷಿ ಸಮೇತ ದೂರು ಬಂದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಮೂವರು ಪೊಲೀಸರನ್ನು ಅಮಾನತ್ತು ಮಾಡಿ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ.

ಕೆಆರ್‌ಎಸ್ ಪೊಲೀಸ್ ಠಾಣೆಯ ಮುಖ್ಯಪೇದೆ ಸೇರಿದಂತೆ ಒಟ್ಟು ಮೂವರು ಪೊಲೀಸರು ಸೇರಿಕೊಂಡು ಹೊರ ರಾಜ್ಯದಿಂದ ಮಂಡ್ಯದ ಕೆಆರ್‌ಎಸ್ ಬೃಂದಾವನ ಗಾರ್ಡನ್ ನೋಡಲು ಬರುತ್ತಿದ್ದ ವಾಹನಗಳಿಂದ ಹಣ ವಸೂಲಿ ಮಾಡುತ್ತಿದ್ದರು.

ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಠಾಣೆಯ ಮುಖ್ಯ ಪೇದೆ ಪುರುಷೋತ್ತಮ್, ಪೇದೆಗಳಾದ ಅನಿಲ್ ಕುಮಾರ್, ಪ್ರಭುಸ್ವಾಮಿ ಅಮಾನತ್ತಾದವರಾಗಿದ್ದಾರೆ.