ಮನೆ ರಾಜ್ಯ ಹದಗೆಟ್ಟ ರಸ್ತೆ: ರಾಜಕಾರಣಿಗಳ ಬಗ್ಗೆ ಕಿರಣ್ ಮಜುಂದಾರ್ ಷಾ ಆಕ್ರೋಶ

ಹದಗೆಟ್ಟ ರಸ್ತೆ: ರಾಜಕಾರಣಿಗಳ ಬಗ್ಗೆ ಕಿರಣ್ ಮಜುಂದಾರ್ ಷಾ ಆಕ್ರೋಶ

0

ಆನೇಕಲ್(Anekhal): ತಾಲ್ಲೂಕಿನ ಹುಸ್ಕೂರು-ಸರ್ಜಾಪುರ ರಸ್ತೆ ಹಾಗೂ ಸುತ್ತಮುತ್ತಲಿನ ಕೆಟ್ಟ ರಸ್ತೆಗಳ ಕುರಿತು ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜುಂದಾರ್‌ ಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು,  ಈ ಸಂಬಂಧ ಶಾಸಕ, ಸಂಸದರು ಮತ್ತು ಸ್ಥಳೀಯ ರಾಜಕಾರಣಿಗಳನ್ನು ಕಟುವಾದ ಶಬ್ಧಗಳಲ್ಲಿ ಟೀಕಿಸಿ ಟ್ವೀಟ್ ಮಾಡಿದ್ದಾರೆ.

ಉತ್ತಮ ರಸ್ತೆ ಸೌಕರ್ಯ ಕಲ್ಪಿಸದ ಆನೇಕಲ್ ತಾಲೂಕಿನ ಹುಸ್ಕೂರು ಗ್ರಾಮ ಪಂಚಾಯತಿ ಆಡಳಿತ ಮಂಡಳಿ, ಆನೇಕಲ್ ಶಾಸಕ ಮತ್ತು ಆನೇಕಲ್ ಕ್ಷೇತ್ರದ ಸಂಸದರು ಜವಾಬ್ದಾರಿ ಇಲ್ಲದ ರಾಜಕಾರಣಿಗಳು ಎಂದು ಜರಿದಿದ್ದಾರೆ.

ಹುಸ್ಕೂರು – ಸರ್ಜಾಪುರ ರಸ್ತೆ ಪರಿಸ್ಥಿತಿ ಬಹಳ ಶೋಚನೀಯವಾಗಿದೆ. ಉತ್ತಮ ರಸ್ತೆಯ ಸೌಕರ್ಯ ನೀಡಲು ಸಾಧ್ಯವಾಗದಿದ್ದರೆ ಸರ್ಕಾರ ಯಾಕೆ ಬಸ್ ಡಿಪೋ, ವಸತಿ ಗೃಹಗಳನ್ನು ನಿರ್ಮಿಸಬೇಕಿತ್ತು ಎಂದು ಖಾರವಾಗಿ ಟ್ವೀಟ್​ನಲ್ಲಿ ಪ್ರಶ್ನಿಸಿದ್ದಾರೆ.