ಬೆಳ್ಮಣ್: ನಿಯಂತ್ರಣ ತಪ್ಪಿ ಲಕ್ಸುರಿ ಕಾರೊಂದು ಪಲ್ಟಿಯಾದ ಘಟನೆ ಜ.17ರ ಶುಕ್ರವಾರ ಬೆಳಿಗ್ಗೆ ಸುಮಾರು 3 ಗಂಟೆಗೆ ಮುಂಡ್ಕೂರು- ಜಾರಿಗೆಕಟ್ಟೆ ಚರ್ಚ್ ಬಳಿ ನಡೆದಿದೆ.
ಕಾರು ಶಿವಮೊಗ್ಗದಿಂದ ಮಂಗಳೂರಿಗೆ ಪ್ರಯಾಣಿಸುತಿತ್ತು. ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಒಬ್ಬ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕಟೀಲು ಪಾದಯಾತ್ರೆ ನಡೆಸುತ್ತಿರುವ ಭಕ್ತರು ಕೂಡಲೇ ಸಮಾಜಸೇವಕ ಕೆದಿಂಜೆ ಸುಪ್ರಿತ್ ಶೆಟ್ಟಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಪಂದಿಸಿದ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಗಾಯಳುಗಳನ್ನು ಕಿನ್ನಿಗೋಳಿ ಆಸ್ಪತ್ರೆಗೆ ದಾಖಲಿಸಲು ನೆರವಾದರು.














