ಮನೆ ಸುದ್ದಿ ಜಾಲ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ

0

ಮೈಸೂರು (Mysuru): ಬೆಲೆ ಏರಿಕೆಯನ್ನು ಖಂಡಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜನತಾ ನಗರ ನಿವಾಸಿಗಳು ನಗರದ ಮಾರುತಿ ಟೆಂಟ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದರು.
ಸೋಶಿಯಲಿಸ್ಟ್ ಯೂನಿಟಿ ಸೆಂಟರ್ಆಫ್ ಇಂಡಿಯಾ ( ಕಮ್ಯುನಿಸ್ಟ್) ಪಕ್ಷದಿಂದ ಬೆಲೆ ಏರಿಕೆ, ಭ್ರಷ್ಟಾಚಾರ ವಿರೋಧಿಸಿ, ಜನರ ಐಕ್ಯತೆ ಬಲಪಡಿಸಿ ಎಂದು ಆಗ್ರಹಿಸಿ ಮೇ 20ರಿಂದ ಜೂನ್ 20ರವರೆಗೆ ನಡೆಯುತ್ತಿರುವ ರಾಜ್ಯವ್ಯಾಪಿ ಆಂದೋಲನದ ಭಾಗವಾಗಿ ಸ್ಥಳೀಯ ಮಟ್ಟದ ಪ್ರತಿಭಟನೆ ಸಂಘಟಿಸಲಾಗಿತ್ತು.
ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಸೃಷ್ಟಿ ಖಂಡಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜೂ.18 ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಿ ಮನವಿ ಪತ್ರವನ್ನು ಸಲ್ಲಿಸಲಾಗುವುದು. ಇದಕ್ಕೆ ಪೂರಕವಾಗಿ ಜನತಾ ನಗರದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಪ್ರತಿಭಟನಕಾರರು ತಿಳಿಸಿದರು.