ಮನೆ ಅಪರಾಧ ಪ್ರತ್ಯೇಕ ಅಪಘಾತ: ಇಬ್ಬರು ಬೈಕ್ ಸವಾರರ ಸಾವು

ಪ್ರತ್ಯೇಕ ಅಪಘಾತ: ಇಬ್ಬರು ಬೈಕ್ ಸವಾರರ ಸಾವು

0

ತುಮಕೂರು(Tumkur): ಪಾವಗಡ ತಾಲ್ಲೂಕಿನಲ್ಲಿ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಮಂಗಳವಾಡದ ಕಡೆಗೆ ಹೋಗುತ್ತಿದ್ದ ಬೈಕ್ ಅರಸೀಕೆರೆ ಕಡೆ ತೆರಳುತ್ತಿದ್ದ ಟ್ರ್ಯಾಕ್ಟರ್ ತುಮಕುಂಟೆ ಗೇಟ್ ಬಳಿ ಮುಖಾಮುಖಿಯಾಗಿದ್ದು, ದ್ವಿಚಕ್ರ ವಾಹನ ಸವಾರ ಕ್ಯಾತಗಾನಹಳ್ಳಿಯ ನರಸಿಂಹಮೂರ್ತಿ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ನಂತರ ನಿಲ್ಲಿಸದೆ ಅರಸೀಕೆರೆ ಕಡೆ ಹೋಗುತ್ತಿದ್ದ ಟ್ರ್ಯಾಕ್ಟರ್ ಅನ್ನು ದ್ವಿ ಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಹೋಗುತ್ತಿರುವಾಗ, ಅರಸೀಕೆರೆ ಬಳಿಯ ಪೆಟ್ರೋಲ್ ಬಂಕ್ ಸಮೀಪ ನಿಲ್ಲಿಸಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ತುಮಕುಂಟೆ ಗ್ರಾಮದ ತಿಮ್ಮಯ್ಯ (45) ಮೃತಪಟ್ಟಿದ್ದಾರೆ.

ದ್ವಿಚಕ್ರ ವಾಹನದಲ್ಲಿದ್ದ ತಿಪ್ಪೇಸ್ವಾಮಿ ಅವರಿಗೆ ತೀವ್ರ ಗಾಯಗಳಾಗಿವೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.