ಮನೆ ಅಪರಾಧ ಕಡಲೆ ಬಣವೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಕಡಲೆ ಬಣವೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

0

ಹುಬ್ಬಳ್ಳಿ: ಕಡಲೆ ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಕಡಲೆ ಬಣವೆ ಸುಟ್ಟಿರುವ ಘಟನೆ ಭಾನುವಾರ ರಾತ್ರಿ ತಾಲೂಕಿನ ಕುಸುಗಲ್​​​ ಗ್ರಾಮದ ಹೊಲದಲ್ಲಿ ನಡೆದಿದೆ.

Join Our Whatsapp Group

ಭೀಮಪ್ಪ ಸುಂಕದ ಎಂಬುವವರಿಗೆ ಸೇರಿದ ಬಣವೆ ಇದಾಗಿದ್ದು, ಲಕ್ಷಾಂತರ ರೂ. ನಷ್ಟವಾಗಿದೆ. ಈ ದುಷ್ಕತೃ ಮೆರೆದ ಕಿಡಿಗೇಡಿಗಳು ಯಾರು ಎಂಬುದು ತನಿಖೆಯಿಂದ ಹೊರಬರಬೇಕಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

“ಕಿಡಿಗೇಡಿಗಳಿಂದ ಅಪಾರ ಪ್ರಮಾಣದ ಕಡಲೆ ಹಾಳಾಗಿದ್ದು, ಲಕ್ಷಾಂತರ ರೂ. ಹಾನಿಯಾಗಿದ್ದು, ನಮಗೆ ಪರಿಹಾರ ಒದಗಿಸಿಕೊಡಬೇಕು ಹಾಗೂ ಇಂತಹ ಹೀನ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ನೀಡಬೇಕು. ಸಾಲ ಸೂಲ ಮಾಡಿ ಫಸಲು ಬೆಳೆದಿದ್ದೆವು. ಆದರೆ ಎಲ್ಲಾ ಮಣ್ಣು ಪಾಲಾಗಿದೆ” ಎಂದು ಭೀಮಪ್ಪ ಸುಂಕದ ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.

ಘಟನೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.