ಮನೆ ರಾಷ್ಟ್ರೀಯ ಸಿಧು ಮೂಸೆವಾಲ ಹತ್ಯೆ ಪ್ರಕರಣ: ಮತ್ತೊಬ್ಬನ ಬಂಧನ

ಸಿಧು ಮೂಸೆವಾಲ ಹತ್ಯೆ ಪ್ರಕರಣ: ಮತ್ತೊಬ್ಬನ ಬಂಧನ

0

ಚಂಡೀಗಢ (Chandigarh): ಪಂಜಾಬ್ ಗಾಯಕ ಸಿಧು ಮೂಸೆವಾಲ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಪೊಲೀಸರು ಮತ್ತೊಬ್ಬನನ್ನು ಬಂಧಿಸಿದ್ದಾರೆ.

ಸಿದ್ದೇಶ್ ಹಿರಾರಾಮ್ ಕಾಂಬ್ಳೆ ಅಲಿಯಾಸ್ ಮಹಾಕಾಲ್ ಬಂಧಿತ ಆರೋಪಿ. ಕಾಂಬ್ಳೆಯ ನಿಕಟ ಸಹವರ್ತಿಯಾಗಿರುವ ಸಂತೋಷ್ ಜಾಧವ್ ಎಂಬಾತನನ್ನೂ ವಶಕ್ಕೆ ಪಡೆಯಲಾಗಿದ್ದು, ಈತನನ್ನು ಅಪರಾಧ ಕೃತ್ಯದಲ್ಲಿ ಶೂಟರ್ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಕಾಂಬ್ಳೆ ವಿರುದ್ಧ ಎಂಸಿಒಸಿಎ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಈತನ ವಿರುದ್ಧ 2021 ರಲ್ಲಿ ಮೊನ್ಚಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
 
ಮಹಾರಾಷ್ಟ್ರ ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಕುಲ್ವಂತ್ ಕುಮಾರ್ ಸರನ್ಗಾಲ್ ಈ ಬಗ್ಗೆ ಮಾಹಿತಿ ನೀಡಿದ್ದು ಆರೋಪಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ಭಾಗ ಎಂದು ತಿಳಿಸಿದ್ದಾರೆ.