ಮನೆ ಅಪರಾಧ ಮಂಡ್ಯ: ಗೃಹಿಣಿ ಅನುಮಾನಾಸ್ಪದವಾಗಿ ಸಾವು

ಮಂಡ್ಯ: ಗೃಹಿಣಿ ಅನುಮಾನಾಸ್ಪದವಾಗಿ ಸಾವು

0

ಮಂಡ್ಯ: ತಾಲೂಕಿನ ಕೆ.ಗೌಡಗೆರೆ ಗ್ರಾಮದಲ್ಲಿ ಗೃಹಿಣಿ ಜಾಹ್ನವಿ (26) ಮೃತದೇಹ ಪತ್ತೆಯಾಗಿದೆ.

Join Our Whatsapp Group

ಜಾಹ್ನವಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಲಾಗಿದೆ ಮೃತಳ ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಪತಿ ಯಶವಂತ್​ ವಿರುದ್ಧ ಜಾಹ್ನವಿ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಜಾಹ್ನವಿ 4 ವರ್ಷದ ಹಿಂದೆ ಯಶವಂತ್​ನನ್ನು ಮದುವೆಯಾಗಿದ್ದರು.

ಮದುವೆಯಾದಗಿನಿಂದಲೂ ಪತ್ನಿಗೆ ಜಾಹ್ನವಿಗೆ ಪತಿ ಯಶವಂತ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿಬಂದಿದೆ. ನಿತ್ಯ ಕುಡಿದು ಬಂದು ಜಾಹ್ನವಿಗೆ ಹಲ್ಲೆ ಮಾಡುತ್ತಿದ್ದ ಆರೋಪವಿದೆ. ಜಾಹ್ನವಿ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂಬ ಮಾಹಿತಿ ಲಭ್ಯವಾಗಿದೆ.

ಆದರೆ, ಮೃತದೇಹದ ಮೈಮೇಲೆ ಮತ್ತು ಮುಖದ ಮೇಲೆ ರಕ್ತದ ಕಲೆ ಪತ್ತೆಯಾಗಿದೆ. ಹಲ್ಲೆ ನಡೆಸಿ, ಬಳಿಕ ಕೊಲೆ ಮಾಡಿದ್ದಾನೆಂದು ಜಾಹ್ನವಿ ಪೋಷಕರು ಆರೋಪಿಸಿದ್ದಾರೆ. ಕೆರಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.