ಮನೆ ಅಪರಾಧ ಬಸ್ಸಿನಲ್ಲಿ ಕಳ್ಳತನಕ್ಕೆ ಯತ್ನ: ಮೂವರು ಮಹಿಳೆಯರ ಬಂಧನ

ಬಸ್ಸಿನಲ್ಲಿ ಕಳ್ಳತನಕ್ಕೆ ಯತ್ನ: ಮೂವರು ಮಹಿಳೆಯರ ಬಂಧನ

0

ಮಂಡ್ಯ(Mandya): ಸಾರಿಗೆ ಬಸ್ಸಿನಲ್ಲಿ ಕಳ್ಳತನಕ್ಕೆ ಯತ್ನಿಸಿದ ಮೂವರು ಮಹಿಳೆಯರನ್ನು  ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಕರ ಬಳಿ ಇದ್ದಂತಹ ವಸ್ತುಗಳನ್ನು ಕಳ್ಳತನಕ್ಕೆ ಯತ್ನಿಸುತ್ತಿದ್ದನ್ನು ಗಮನಿಸಿದ ಪ್ರಯಾಣಿಕರೊಬ್ಬರು ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದಾರೆ.

ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ಸಿನಲ್ಲಿ ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಸ್ಸನ್ನು ಅಡ್ಡಗಟ್ಟಿ ಶ್ರೀರಂಗಪಟ್ಟಣದ ಪಶ್ಚಿಮವಾಹಿನಿ ಬಳಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಯು ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.