ಮನೆ ರಾಜಕೀಯ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಕಾಂಗ್ರೆಸ್‌ ನೆರವು ನೀಡಿದೆ: ಹೆಚ್.ಡಿ.ಕುಮಾರಸ್ವಾಮಿ

ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಕಾಂಗ್ರೆಸ್‌ ನೆರವು ನೀಡಿದೆ: ಹೆಚ್.ಡಿ.ಕುಮಾರಸ್ವಾಮಿ

0

ಬೆಂಗಳೂರು(Bengaluru):  ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಕಾಂಗ್ರೆಸ್‌ ನೆರವು ನೀಡಿದೆ. ಇದಕ್ಕಾಗಿ ಬಿಜೆಪಿ ಕಾಂಗ್ರೆಸ್‌ನವರಿಗೆ ಅಭಿನಂದನೆ ಸಲ್ಲಿಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕಾಂಗ್ರೆಸ್‌ನವರನ್ನು ಭೇಟಿಮಾಡಲು ಹೋಗಿದ್ದರು. ನಾನು ಕೂಡ ಕಾಂಗ್ರೆಸ್‌ನವರನ್ನು ಅಭಿನಂದಿಸುತ್ತೇನೆ  ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಶನಿವಾರದಿಂದ ಹೊಸ ಶಕೆ ಆರಂಭವಾಗಲಿದೆ. ಇನ್ನು ಯಾವುದೇ ಹೊಂದಾಣಿಕೆಗೂ ಸಿದ್ಧವಿಲ್ಲ ಎಂದು ಹೇಳಿದರು.

ಎರಡನೇ ಪ್ರಾಶಸ್ತ್ಯದ ಮತಗಳನ್ನೂ ಜೆಡಿಎಸ್‌ ಅಭ್ಯರ್ಥಿಗೆ ನೀಡದಂತೆ ಕಾಂಗ್ರೆಸ್‌ ಹೈಕಮಾಂಡ್‌ ಸೂಚಿಸಿದೆ ಎಂದು ಆ ಪಕ್ಷದ ನಾಯಕರು ಹೇಳಿದ್ದಾರೆ. ಜಾತ್ಯತೀತ ತತ್ವದ ಬಗ್ಗೆ ಮಾತನಾಡುವವರ ಉಡಾಫೆ ರಾಜಕಾರಣಕ್ಕೆ ಸರಿಯಾದ ಉತ್ತರ ನೀಡಲಾಗುವುದು ಎಂದರು.

ನಮ್ಮ ಪಕ್ಷದ 30-31 ಶಾಸಕರು ನಮ್ಮ ಜತೆಯೇ ಇದ್ದಾರೆ. ಕೋಲಾರದ ಶ್ರೀನಿವಾಸ ಗೌಡ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಚಲಾಯಿಸುವುದಾಗಿ ಹೇಳಿದ್ದಾರೆ.

ದಿ ಗ್ರೇಟ್‌ ರಮೇಶ್‌ ಕುಮಾರ್‌ ಮತ್ತು ಸಿದ್ದರಾಮಯ್ಯ ಸೇರಿಕೊಂಡು ಶ್ರೀನಿವಾಸ ಗೌಡರ ಆತ್ಮಸಾಕ್ಷಿಯ ಮತ ಪಡೆಯುವಲ್ಲಿ ಸಫಲರಾಗಿದ್ದಾರೆ . ಅದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.