ಮನೆ ಅಪರಾಧ ನೀರು ಹಿಡಿಯುವಾಗ ವಿದ್ಯುತ್ ಶಾಕ್: ಮಹಿಳೆ ಸಾವು

ನೀರು ಹಿಡಿಯುವಾಗ ವಿದ್ಯುತ್ ಶಾಕ್: ಮಹಿಳೆ ಸಾವು

0

ಬೆಂಗಳೂರು: ನೀರು ಹಿಡಿಯುವಾಗ ಕರೆಂಟ್ ಶಾಕ್ ಹೊಡೆದು ಮಹಿಳೆಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಕೆ ಆರ್ ಮಾರುಕಟ್ಟೆ ರಸ್ತೆಯ ಆನಂದಪುರದಲ್ಲಿ ನಡೆದಿದೆ. ಸೆಲ್ವಿ ಮೃತ ದುರ್ದೈವಿ.

ಇಲ್ಲಿರುವ ಯಾವ ಮನೆಗೂ ನೀರಿನ ಸಂಪರ್ಕ ಇಲ್ಲ. ದೊಡ್ಡ ಪೈಪ್‌ನಲ್ಲಿ ಅಲ್ಲಲ್ಲಿ ಮೋಟರ್ ಕನೆಕ್ಷನ್ ನೀಡಲಾಗಿದ್ದು, ಮೋಟರ್ ಸ್ಟಾರ್ಟ್ ಮಾಡುವಾಗ ಕರೆಂಟ್ ತಗುಲಿ ಮಹಿಳೆ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಇಂದು ಬೆಳಗ್ಗೆ 5:30ರ ಸುಮಾರಿಗೆ ಘಟನೆ ಸಂಭವಿಸಿದೆ.

ಮಹಿಳೆ ಸಾವಿಗೆ ಆಕ್ರೋಶಗೊಂಡ ಸ್ಥಳೀಯರು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದ್ದಾರೆ. ಪರಿಣಾಮ ಮಾರ್ಕೆಟ್ ರಸ್ತೆಯಲ್ಲಿ ಕೆಲ ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ನ್ಯಾಯ ಬೇಕು ಎಂದು ಘೋಷಣೆ ಕೂಗಿ, ಜಲಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ನಾಲ್ಕೈದು ಜನ ಇದೇ ರೀತಿ ಸಾವನ್ನಪ್ಪಿದ್ದಾರೆ. ಯಾರೂ ನಮ್ಮ ಸಮಸ್ಯೆ ಕೇಳ್ತಿಲ್ಲ. ನಮ್ಮ ಸಮಸ್ಯೆ ಈಡೇರಿಲ್ಲ ಅಂದ್ರೆ, ಸಾವಿಗೆ ನ್ಯಾಯ ಸಿಕ್ಕಿಲ್ಲ ಅಂದ್ರೆ ನಮ್ಮ ಪ್ರತಿಭಟನೆ ಮುಂದುವರೆಯುತ್ತೆ ಎಂದು ಸಂಪೂರ್ಣ ರಸ್ತೆ ಬಂದ್ ಮಾಡಿದ್ದಾರೆ. ಹಲವು ವರ್ಷಗಳಿಂದ ನೀರಿನ ಸಮಸ್ಯೆ ಬಗೆಹರಿದಿಲ್ಲ. ನೀರಿಗಾಗಿ ಪರದಾಡ್ತಿದ್ದೀವಿ. ನೀರು ಕೇಳಿದರೆ ನಮ್ಮ ಮೇಲೆ ಎಫ್‌ಐಆರ್ ಹಾಕ್ತಾರೆ. ನೀರು ಕೊಟ್ಟಿದ್ರೆ ನಾವ್ಯಾಕೆ ಮೋಟರ್ ಹಾಕ್ತಿದ್ವಿ ಎಂದು ಸ್ಥಳೀಯ ಶಾಸಕ ಜಮೀರ್ ವಿರುದ್ಧ ಜನರು ಕಿಡಿಕಾರಿದ್ದಾರೆ.