ಮನೆ ರಾಜ್ಯ ರಾಜ್ಯ ಸರ್ಕಾರಕ್ಕೆ 1 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್‌

ರಾಜ್ಯ ಸರ್ಕಾರಕ್ಕೆ 1 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್‌

0

ಬೆಂಗಳೂರು (Bengaluru): ಪ್ರಾಸಿಕ್ಯೂಷನ್‌ ಪೂರ್ವಾನುಮತಿ ಪಡೆಯಲು ವಿಳಂಬ ಮಾಡಿದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ 1 ಲಕ್ಷ ರೂ. ದಂಡ ವಿಧಿಸಿದೆ.

ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಅರವಿಂದ ಜಾಧವ್ ತಾಯಿ ಹೆಸರಿನಲ್ಲಿ ಸರ್ಕಾರಿ ಜಮೀನು ಕಬಳಿಸಲು ನಕಲಿ ದಾಖಲೆ ಸೃಷ್ಟಿಸಿದ ಪ್ರಕರಣದಲ್ಲಿ ಆರೋಪಿಯಾಗಿರುವ ಅಧಿಕಾರಿಯೊಬ್ಬರ ವಿರುದ್ಧ ಪ್ರಾಸಿಕ್ಯೂಷನ್‌ ಪೂರ್ವಾನುಮತಿ ಪಡೆಯಲು ರಾಜ್ಯ ಸರ್ಕಾರ ವಿಳಂಬ ಮಾಡಿದೆ. ಹೀಗಾಗಿ ದಂಡ ವಿಧಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಬಿ. ಗಂಗಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್‌.ಪಿ.ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ನಿವೃತ್ತ ಮುಖ್ಯ ಕಾರ್ಯದರ್ಶಿ ಸರ್ಕಾರದ 66 ಎಕರೆ ಕಬಳಿಸಲು ಯತ್ನಿಸಿದ್ದಾರೆ ಎನ್ನಲಾಗಿದೆ. 2016ರಲ್ಲೇ ದೂರು ದಾಖಲಾಗಿದ್ದರೂ ಕಠಿಣ ಕ್ರಮ ಕೈಗೊಂಡಿಲ್ಲ. ಇದು ಸರ್ಕಾರದ ಜಡತ್ವಕ್ಕೆ ಸಾಕ್ಷಿ ಎಂದು ಕಿಡಿ ಕಾರಿದೆ.

ದಂಡದ ಮೊತ್ತವನ್ನು ಒಂದು ವಾರದೊಳಗೆ ಠೇವಣಿ ಇಡಬೇಕು. ಪೂರ್ವಾನುಮತಿಗೆ ಕಡತಗಳನ್ನು ಕೇಂದ್ರಕ್ಕೆ ರವಾನಿಸದ ಅಧಿಕಾರಿಗಳಿಂದ ಹಣ ವಸೂಲಿ ಮಾಡಬೇಕು ಎಂದು ಎಚ್ಚರಿಸಿದೆ. ಅರ್ಜಿದಾರರ ಪರ ಎ.ವಿ.ನಿಶಾಂತ್ ವಾದ ಮಂಡಿಸಿದರು.