ನವದೆಹಲಿ: ಭಯೋತ್ಪಾದನೆಯ ವಿರುದ್ಧ ಭಾರತ ಸಮರ ಸಾರಿದೆ. ಯಾವುದೇ ಭಯೋತ್ಪಾದನೆಯನ್ನು ಭಾರತ ಯುದ್ಧ ಎಂದೇ ಪರಿಗಣಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.
ಇಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಹಾಗೂ ಎಲ್ಲಾ ಸೇನಾ ಮುಖ್ಯಸ್ಥರ ಜೊತೆಗೆ ನರೇಂದ್ರ ಮೋದಿಯವರು ಮಹತ್ವದ ಸಭೆ ನಡೆಸಿ ಈ ನಿರ್ಧಾರ ಕೈಗೊಂಡಿದ್ದಾರೆ. ಭಯೋತ್ಪಾದನೆ ವಿರುದ್ಧ ಭಾರತ ಯುದ್ಧ ಸಾರಿದೆ. ಯಾವುದೇ ಉಗ್ರರ ದಾಳಿಯನ್ನು ಇದೀಗ ಯುದ್ಧ ಎಂದು ಪರಿಗಣಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಉಗ್ರರ ದಾಳಿಯನ್ನು ಯುದ್ಧ ಎಂದು ಪರಿಗಣಿಸಲು ಕೇಂದ್ರ ಸರ್ಕಾರ ಇದೀಗ ಮಹತ್ವದ ನಿರ್ಧಾರ ಕೈಗೊಂಡಿದೆ. ಪಾಕಿಸ್ತಾನ ಹಾಗೂ ಉಗ್ರರಿಗೆ ಕೇಂದ್ರ ಸರ್ಕಾರ ಈ ಮೂಲಕ ಖಡಕ್ ಸಂದೇಶ ರವಾನಿಸಿದೆ.
ಉಗ್ರರ ಸಂಹಾರ ಮಾಡುವವರೆಗೂ ಯುದ್ಧ ನಿಲ್ಲುವುದಿಲ್ಲ ಎಂದು ಪ್ರಧಾನಿ ಮೋದಿ ಪಾಕಿಸ್ತಾನಕ್ಕೆ ಮತ್ತು ಉಗ್ರರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಇನ್ನು ಮುಂದೆ ಯಾವುದೇ ದಾಳಿಯಾದರೂ ಅದನ್ನು ಭಯೋದ್ಪಾದನೆಯನ್ನು ಪರಿಗಣಿಸುತ್ತೇವೆ. ಆಪರೇಷನ್ ಸಿಂಧೂರ ಮುಂದುವರಿಸುವ ಸುಳಿವು ಇದೀಗ ಪ್ರಧಾನಿ ಮೋದಿ ನೀಡಿದ್ದಾರೆ.
ಪಾಕಿಸ್ತಾನದಲ್ಲಿ ಮಿಲಿಟರಿ ಸೈನಿಕರ ಸಂಖ್ಯೆ ಕಡಿಮೆಯಿದ್ದು ಉಗ್ರರ ಬಳಸಿಕೊಂಡು ಪ್ರತಿದಾಳಿ ನಡೆಸುತ್ತದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದ ಬೆನ್ನಲ್ಲೇ ಈ ಮಹತ್ವದ ನಿರ್ಧಾರ ಪ್ರಕಟವಾಗಿದೆ.














