ಮನೆ ರಾಜ್ಯ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿದ ಛಲವಾದಿ ನಾರಾಯಣಸ್ವಾಮಿ

ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿದ ಛಲವಾದಿ ನಾರಾಯಣಸ್ವಾಮಿ

0

ಬೆಂಗಳೂರು(Bengaluru): ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನನ್ನನ್ನು ಸದಾ ಅಸ್ಪೃಶ್ಯ ಎಂದು ತಿಳಿಸಿ ನನ್ನ ಜಾತಿಗೆ ಅಪಮಾನ ಮಾಡಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ ಪೊಲೀಸರಿಗೆ ದೂರು ನೀಡಿದ್ದಾರೆ.

ನಗರದ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ ಬಳಿಕ ಅವರು ಸುದ್ದಿಗಾರ ಜತೆ ಮಾತನಾಡಿ, ಜಾತಿ ನಿಂದನೆ ಮಾಡಿರುವುದರಿಂದ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದೇನೆ. ಸಿದ್ದರಾಮಯ್ಯ ಬಗ್ಗೆ ಗೌರವ ಇದೆ. ಆದರೆ, ಅವರ ರಾಜಕೀಯ ಜಿದ್ದಾಜಿದ್ದಿ ವಿಚಾರದಲ್ಲಿ ನಮಗೆ ಆಕ್ಷೇಪವಿದೆ ಎಂದರು.

ಸಿದ್ದರಾಮಯ್ಯ ನಮ್ಮನ್ನು ಗುಲಾಮರು, ಅಸ್ಪೃಶ್ಯರೆಂದು ಕರೆದು ನಿಂದಿಸಿದ್ದಾರೆ. ಇಂಥ ನಿಂದನೆಯ ಅಧಿಕಾರ ಅವರಿಗೆ ಇಲ್ಲ. ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ನೀಡಿದ್ದೇನೆ. ಜಾತಿ ನಿಂದನೆ ಮಾಡಿದ್ದರಿಂದ ಅವರನ್ನು ಬಂಧಿಸಬೇಕು. ಬಂಧಿಸುವಲ್ಲಿ ತಡ ಮಾಡಿದರೆ ಧರಣಿ ಮಾಡುತ್ತೇನೆ ಎಂದೂ ಹೇಳಿದ್ದಾರೆ.

ನನ್ನ ಎಲ್ಲ ಬೆಳವಣಿಗೆಗೂ ಸಿದ್ದರಾಮಯ್ಯ ಬಾಗಿಲು ಹಾಕಿದರು ಎಂದು ಮೋಟಮ್ಮ ಅವರು ತಮ್ಮ ಆತ್ಮಕಥೆಯಲ್ಲಿ ಹೇಳಿದ್ದಾರೆ. ಕಾಂಗ್ರೆಸ್‌ ಮನಸ್ಥಿತಿ ದಲಿತ ವಿರೋಧಿ ಎಂಬುದು ಈ ಮೂಲಕ ವ್ಯಕ್ತವಾಗುತ್ತದೆ ಎಂದೂ ನಾರಾಯಣಸ್ವಾಮಿ ತಿಳಿಸಿದ್ದಾರೆ.