ಮನೆ ರಾಷ್ಟ್ರೀಯ ಶೀಘ್ರದಲ್ಲೇ ಅಗ್ನಿಪಥ್ ಯೋಜನೆ ಅಡಿ ನೇಮಕಾತಿ ಪ್ರಕ್ರಿಯೆ ಆರಂಭ: ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ

ಶೀಘ್ರದಲ್ಲೇ ಅಗ್ನಿಪಥ್ ಯೋಜನೆ ಅಡಿ ನೇಮಕಾತಿ ಪ್ರಕ್ರಿಯೆ ಆರಂಭ: ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ

0

ನವದೆಹಲಿ (New Delhi): ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿವೆ. ಇದರ ಮಧ್ಯೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ಶೀಘ್ರದಲ್ಲೇ ಅಗ್ನಿಪಥ್ ಯೋಜನೆ ಅಡಿ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ ಶುಕ್ರವಾರ ಹೇಳಿದ್ದಾರೆ.
ಕೇಂದ್ರ ಸರ್ಕಾರ ಅಗ್ನಿಪಥ್ ನೇಮಕಾತಿ ಪ್ರಕ್ರಿಯೆ ಆರಂಭದ ಬಗ್ಗೆ ಅಧಿಕೃತ ದಿನಾಂಕವನ್ನು ಇನ್ನೂ ಘೋಷಿಸಿಲ್ಲ. ಆದರೆ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ ಮತ್ತು ಡಿಸೆಂಬರ್ 2022 ರಲ್ಲಿ  ಮೊದಲ ಅಗ್ನಿವೀರರಿಗೆ ತರಬೇತಿಯನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದ್ದಾರೆ.
ಇಂದು ವಿಶೇಷ ಸಂವಾದದಲ್ಲಿ ಮಾತನಾಡಿದ ಮನೋದ್ ಪಾಂಡೆ ಅವರು, ನೇಮಕಾತಿ ಪ್ರಕ್ರಿಯೆಯು ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಇನ್ನೆರಡು ದಿನಗಳಲ್ಲಿ ಅಧಿಕೃತ ವೆಬ್‌ಸೈಟ್‌ನಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗುವುದು. ಅದರ ನಂತರ ನೋಂದಣಿ ಮತ್ತು ರ್ಯಾಲಿ ಬಗ್ಗೆ ನಮ್ಮ ಸೇನಾ ನೇಮಕಾತಿ ಸಂಸ್ಥೆಗಳು ವಿವರವಾದ ವೇಳಾಪಟ್ಟಿಯನ್ನು ಘೋಷಿಸುತ್ತವೆ ಎಂದಿದ್ದಾರೆ.
ಅಗ್ನಿವೀರರು ನೇಮಕಾತಿ ತರಬೇತಿ ಕೇಂದ್ರಗಳಿಗೆ ಹೋಗುವ ಬಗ್ಗೆ ಉoತ್ತರಿಸಿದ ಸೇನಾ ಮುಖ್ಯಸ್ಥರು,  ಮೊದಲ ಅಗ್ನಿವೀರರಿಗೆ ಈ ಡಿಸೆಂಬರ್‌ನಲ್ಲಿ(2022 ರಲ್ಲಿ) ತರಬೇತಿ ಕೇಂದ್ರಗಳಲ್ಲಿ ತರಬೇತಿಯು ಪ್ರಾರಂಭವಾಗುತ್ತದೆ. ಸಕ್ರಿಯ ಸೇವೆಯು2023 ರ ಮಧ್ಯದಲ್ಲಿ ಪ್ರಾರಂಭವಾಗುತ್ತದೆ ಎಂದು ಹೇಳಿದ್ದಾರೆ.
ಕೊರೊನಾದಿಂದಾಗಿ ಕಳೆದ ಎರಡು ವರ್ಷಗಳಿಂದ ಸೇನೆಯಲ್ಲಿ ನೇಮಕಾತಿ ನಡೆದಿಲ್ಲ. 2019-2020 ರಲ್ಲಿ ಸೇನೆಯು ಜವಾನರನ್ನು ನೇಮಿಸಿಕೊಂಡಿತು ಮತ್ತು ಅಂದಿನಿಂದ ಯಾವುದೇ ನೇಮಕಾತಿ ನಡೆದಿಲ್ಲ.