ಮನೆ ಅಪರಾಧ ಪಿಯು ಅನುತ್ತೀರ್ಣ: ಮನನೊಂದು ಮಂಡ್ಯದ ವಿದ್ಯಾರ್ಥಿನಿ ಆತ್ಮಹತ್ಯೆ

ಪಿಯು ಅನುತ್ತೀರ್ಣ: ಮನನೊಂದು ಮಂಡ್ಯದ ವಿದ್ಯಾರ್ಥಿನಿ ಆತ್ಮಹತ್ಯೆ

0

ಮಂಡ್ಯ(Mandya) : ಇಂದು ಪ್ರಕಟವಾದ ದ್ವಿತೀಯ  ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿನಿಯೊಬ್ಬಳು ಮನನೊಂದು ಸಾವಿಗೀಡಾಗಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕ್ಕಿನ ಮಹದೇವಪುರ ಗ್ರಾಮದಲ್ಲಿ ನಡೆದಿದೆ.

ಮಂಡ್ಯದ ಸ್ಯಾಂತೋ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸ್ಪಂದನಾ ಅವರೇ ಸಾವಿಗೀಡಾದವರು. ಮಹದೇವಪುರ ಗ್ರಾಮದ ಜಗದೀಶ್‌ ಎಂಬುವವರ ಪುತ್ರಿಯಾದ ಈಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದ ಸ್ಪಂದನಾ ಪಿಯುಸಿಯಲ್ಲಿ ವಿಜ್ಞಾನ ವಿಭಾದಲ್ಲಿ ವ್ಯಾಸಂಗ ಮಾಡುತ್ತಿದ್ದು, 3 ವಿಷಯಗಳಲ್ಲಿ ಅನುತ್ತೀರ್ಣಗೊಂಡಿದ್ದಳು ಎನ್ನಲಾಗಿದೆ.