ಮನೆ ಸ್ಥಳೀಯ ಜು.12 ರಂದು ರಾಷ್ಟ್ರೀಯ ಲೋಕ್-ಅದಾಲತ್

ಜು.12 ರಂದು ರಾಷ್ಟ್ರೀಯ ಲೋಕ್-ಅದಾಲತ್

0

ಮಂಡ್ಯ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ರಾಜ್ಯಾದ್ಯಂತ ಜುಲೈ 12 ರಂದು ರಾಷ್ಟ್ರೀಯ ಲೋಕ್-ಅದಾಲತ್ ನ್ನು ಹಮ್ಮಿಕೊಳಲಾಗಿದೆ.

ಪ್ರಸಕ್ತ ವರ್ಷ ನಡೆಯುತ್ತಿರುವ 2 ನೇ ಲೋಕ್ ಅದಾಲತ್ ಆಗಿದ್ಧು, ಜಿಲ್ಲೆಯಲ್ಲಿ ಬರುವ 7 ತಾಲ್ಲೂಕುಗಳಲ್ಲಿ ಲೋಕ್ ಅದಾಲತ್ ಮುಖಾಂತರ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಪೂರ್ವಭಾವಿ ಬೈಠೆಕ್‌ಗಳನ್ನು ನಡೆಸುತ್ತಿದ್ದು, ಆಸ್ತಿ ವಿವಾದಗಳನ್ನು ಒಳಗೊಂಡAತೆ ಸಿವಿಲ್ ವ್ಯಾಜ್ಯಗಳು, ವಿಭಾಗದ ದಾವೆಗಳು, ಹಣವಸೂಲಾತಿ ದಾವೆಗಳು, ನಿರ್ದಿಷ್ಟ ಪರಿಹಾರ ಕಾಯ್ದೆಯಡಿ ದಾಖಲಿಸಿರುವ ದಾವೆಗಳು,  (MVC) ಮೋಟಾರು ವಾಹನಗಳ ಪ್ರಕರಣಗಳು,  MMRD     ಪ್ರಕರಣಗಳು, ಜೀವನಾಂಶ ಪ್ರಕರಣ, ದಾಂಪತ್ಯ ಪುನರ್ ಸ್ಥಾಪನೆ ಪ್ರಕರಣಗಳು, ರಾಜಿ ಆಗಬಹುದಾದಂತಹ ಕ್ರಿಮಿನಲ್ ಪ್ರಕರಣಗಳನ್ನು ಮತ್ತು ಚೆಕ್ ಬೌನ್ಸ್ ಪ್ರಕರಣಗಳನ್ನು ರಾಜಿಗೆ ತೆಗೆದುಕೊಂಡು ಆಯಾ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್ ನ್ಯಾಯಾಲಯಗಳನ್ನು ರಚಿಸಿ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ.

ಲೋಕ್ ಅದಾಲತ್ ನ್ಯಾಯಾಲಯಗಳಲ್ಲಿ ಬಾಕಿ ಇರುವಂತಹ ಪ್ರಕರಣಗಳ ಜೊತೆಗೆ, ನ್ಯಾಯಾಲಯಕ್ಕೆ ದಾಖಲಾಗುವ ಮುನ್ನ ಅಂದರೆ ವ್ಯಾಜ್ಯಪೂರ್ವ ಪ್ರಕರಣಗಳು (ಬ್ಯಾಂಕ್ ವಸೂಲಾತಿ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಕಾರ್ಮಿಕ ವಿವಾದ ಪ್ರಕರಣಗಳು,) ಇಂತಹ ಪ್ರಕರಣಗಳಿಗೆ ಸಂಬAಧಿಸಿದAತೆ ಉಭಯ ಪಕ್ಷಗಾರರಿಗೆ ನೋಟೀಸ್ ನೀಡಿ ಕರೆಸಿ ಪ್ರಾಧಿಕಾರದ ವತಿಯಿಂದ ಪೂರ್ವಭಾವಿ ಬೈಠಕ್ ನಡೆಸಿ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಹಾಗೂ ಇಂತಹ ಪ್ರಕರಣಗಳಿಗೆ ನ್ಯಾಯಾಲಯಕ್ಕೆ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ. ವಕೀಲರ ಮುಖಾಂತರ ಅಥವಾ ಖುದ್ದಾಗಿ ಪ್ರಾಧಿಕಾರಕ್ಕೆ ಭೇಟಿ ನೀಡಿ ಪ್ರಕರಣವನ್ನು ರಾಜಿಮಾಡಿಕೊಳ್ಳಬಹುದಾಗಿರುತ್ತದೆ.

ಜನ ಸಾಮಾನ್ಯರು ಹಾಗೂ ಕಕ್ಷಿದಾರರು ಲೋಕ್ ಅದಾಲತ್ ನ ಸದುಪಯೋಗವನ್ನು ಪಡೆದುಕೊಂಡು ಯಶಸ್ವಿಗೊಳಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಧೀಶರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.