ಬೆಂಗಳೂರು : ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆ ಸಾಮೂಹಿಕ ಗಣೇಶ ವಿಸರ್ಜನೆ ಮಾಡುವ ಬೆಂಗಳೂರಿನ ಕೆಲವು ಏರಿಯಾಗಳಲ್ಲಿ ಲಿಕ್ಕರ್ ನಿಷೇಧಿಸಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಆದೇಶ ಹೊರಡಿಸಿದ್ದು, ಕಾನೂನು ಸುವ್ಯವಸ್ಥೆಗೆ ತೊಂದರೆಯಾಗುವ ಸಾಧ್ಯತೆ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ.
ಬೆಂಗಳೂರಿನ ಕೆಲವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ CL-4, CL-6 ಪರವಾನಿಗೆ ಹೊರತುಪಡಿಸಿ ಉಳಿದೆಲ್ಲ ಮದ್ಯದಂಗಡಿಗಳನ್ನು ಬಂದ್ ಮಾಡಲಾಗುವುದು ಹಾಗೂ ರೆಸ್ಟೋರೆಂಟ್, ಹೋಟೆಲ್ಗಳಲ್ಲಿ ಆಹಾರ ಸೇವೆಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಉತ್ತರ ವಿಭಾಗದ ಆರ್.ಟಿ ನಗರ, ಜೆಸಿ ನಗರ, ಹೆಬ್ಬಾಳ ಮತ್ತು ಸಂಜಯನಗರ ಹಾಗೂ ಪೂರ್ವ ವಿಭಾಗದ ಡಿಜೆಹಳ್ಳಿಗಳಲ್ಲಿ ಇಂದು ಆ.29ರ ಬೆಳಿಗ್ಗೆ 6ಗಂಟೆಯಿಂದ ಆ.30ರ ಬೆಳಿಗ್ಗೆ 6 ಗಂಟೆವರೆಗೆ ಮದ್ಯ ನಿಷೇಧ ಮಾಡಲಾಗಿದೆ.
ನಾಳೆ ಆ.31ರ ಬೆಳಿಗ್ಗೆ 6ಗಂಟೆಯಿಂದ ಸೆ.01ರ ಬೆಳಿಗ್ಗೆ 6 ಗಂಟೆವರೆಗೆ ಪೂರ್ವ ವಿಭಾಗದ ಡಿಜೆಹಳ್ಳಿ, ಕೆಜಿಹಳ್ಳಿ, ಗೋವಿಂದಪುರ, ಭಾರತಿನಗರ, ಪುಲಿಕೇಶಿನಗರ, ಹಲಸೂರು, ಶಿವಾಜಿನಗರ, ಕಮರ್ಷಿಯಲ್ ಸ್ಟ್ರೀಟ್, ಈಶಾನ್ಯ ವಿಭಾಗದ ಯಲಹಂಕ, ಯಲಹಂಕ ಉಪನಗರ, ಕೊಡಿಗೇಹಳ್ಳಿ, ವಿದ್ಯಾರಣ್ಯಪುರ, ಹೆಬ್ಬಗೋಡಿ ಹಾಗೂ ಸೆ.14ರ ಬೆಳಿಗ್ಗೆ 6ಗಂಟೆಯಿಂದ ಸೆ.15ರ ಬೆಳಿಗ್ಗೆ 6 ಗಂಟೆವರೆಗೆ ಕಾಮಾಕ್ಷಿಪಾಳ್ಯ ಹಾಗೂ ವಿಜಯನಗರ ನಗರಗಳಲ್ಲಿ ಲಿಕ್ಕಲ್ ನಿಷೇಧಿಸಲಾಗಿದೆ.















