ನವದೆಹಲಿ : ಇಂದೋರ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ವಿಮಾನವು ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ವಿಮಾನವು ಇಂದೋರ್ಗೆ ಹೊರಟಿತ್ತು. ಈ ವೇಳೆ ಫ್ಲೈಟ್ನ ಬಲ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು ಅರ್ಧ ಗಂಟೆಗೂ ಹೆಚ್ಚು ನಿಮಿಷ ವಿಮಾನ ಹಾರಾಟ ನಡೆಸಿದೆ. ಬೆಂಕಿ ಸೂಚನೆ ಸಿಕ್ಕ ಬೆನ್ನಲ್ಲೇ ವಿಮಾನ ದೆಹಲಿಗೆ ವಾಪಸ್ ಆಗಿದೆ.
A320 ನಿಯೋ ವಿಮಾನದ ಒಂದು ಎಂಜಿನ್ ಸ್ಥಗಿತಗೊಂಡಿದ್ದು, ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು ಎಂದು ಏರ್ ಇಂಡಿಯಾ ತಿಳಿಸಿದೆ. ಇಂದು ವಿಮಾನವು ತುರ್ತು ಭೂಸ್ಪರ್ಶ ಮಾಡಿತು. 90 ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ತಿಳಿಸಿದೆ.
ಪ್ರಮಾಣಿತ ಕಾರ್ಯವಿಧಾನವನ್ನು ಅನುಸರಿಸಿ ಕಾಕ್ಪಿಟ್ ಸಿಬ್ಬಂದಿ ಎಂಜಿನ್ ಅನ್ನು ಆಫ್ ಮಾಡಲು ನಿರ್ಧರಿಸಿದರು. ವಿಮಾನವು ದೆಹಲಿಗೆ ಹಿಂತಿರುಗಿ ಸುರಕ್ಷಿತವಾಗಿ ಇಳಿಯಿತು.
ಇತ್ತೀಚಿನ ದಿನಗಳಲ್ಲಿ ಏರ್ ಇಂಡಿಯಾ ವಿಮಾನಗಳು ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿರುವ ನಿದರ್ಶನಗಳಿವೆ. ಈ ಘಟನೆಯ ಬಗ್ಗೆ ವಾಯು ಸುರಕ್ಷತಾ ನಿಯಂತ್ರಕ ನಾಗರಿಕ ವಿಮಾನಯಾನ ನಿರ್ದೇಶನಾಲಯಕ್ಕೆ ತಿಳಿಸಲಾಗಿದೆ.















