ಮನೆ ಮನರಂಜನೆ ನಟ ದಿಗಂತ್‌ ಕುತ್ತಿಗೆಗೆ ಪೆಟ್ಟು: ಗೋವಾದಿಂದ ಬೆಂಗಳೂರಿಗೆ ಏರ್‌ ಲಿಫ್ಟ್‌

ನಟ ದಿಗಂತ್‌ ಕುತ್ತಿಗೆಗೆ ಪೆಟ್ಟು: ಗೋವಾದಿಂದ ಬೆಂಗಳೂರಿಗೆ ಏರ್‌ ಲಿಫ್ಟ್‌

0

ಪಣಜಿ (Panaji): ನಟ ದಿಗಂತ್ ಕುತ್ತಿಗೆಗೆ ತೀವ್ರ ಪೆಟ್ಟು ಬಿದ್ದುದ್ದು ಅವರನ್ನು ಗೋವಾದಿಂದ ಬೆಂಗಳೂರಿಗೆ ಏರ್‌ ಲಿಫ್ಟ್‌ ಮಾಡಲಾಗಿದೆ.

ಗೋವಾದ ಸಮುದ್ರ ತಟದಲ್ಲಿ ಸೋಮರ್ ಸಾಲ್ಟ್ ಹೊಡೆಯುವ ವೇಳೆ ದಿಗಂತ್‌ ಕುತ್ತಿಗೆಗೆ ಪೆಟ್ಟಾಗಿದೆ. ಆಸ್ಪತ್ರೆಯ ಮೂಲಗಳ ಪ್ರಕಾರ, ಅವರು ತಮ್ಮ ಪತ್ನಿ ಐಂದ್ರಿತಾ ರೈ ಅವರೊಂದಿಗೆ ರಜೆಗಾಗಿ ಗೋವಾಕ್ಕೆ ಬಂದಿದ್ದರು. ಫಿಟ್‌ನೆಸ್ ಫ್ರೀಕ್ ಆಗಿರುವ ಮತ್ತು ಸಾಹಸ ಕ್ರೀಡೆಗಳನ್ನು ಇಷ್ಟಪಡುವ ದಿಗಂತ್ ಸಮ್ಮರ್‌ಸಾಲ್ಟ್ ಮಾಡುವಾಗ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತದೆ.

ಆರಂಭದಲ್ಲಿ ದಿಗಂತ್ ಅವರನ್ನು ಗೋವಾದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಅವರನ್ನು ವಿಮಾನದ ಮೂಲಕ ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ಕರೆತರಲಾಯಿತು.

ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಆಸ್ಪತ್ರೆಯ ವೈದ್ಯರು ದಿನ ಕಳೆದಂತೆ ಅವರ ಆರೋಗ್ಯ ಸ್ಥಿತಿಯನ್ನು ತಿಳಿಸುವುದಾಗಿ ಹೇಳಿದ್ದಾರೆ.