ಮನೆ ರಾಜಕೀಯ ದಸರಾ ಉದ್ಘಾಟನೆ ವಿಚಾರ ಕೋರ್ಟ್‌ನಲ್ಲೇ ತೀರ್ಮಾನ ಆಗಲಿ: ಸಿಎಂ

ದಸರಾ ಉದ್ಘಾಟನೆ ವಿಚಾರ ಕೋರ್ಟ್‌ನಲ್ಲೇ ತೀರ್ಮಾನ ಆಗಲಿ: ಸಿಎಂ

0

ಬೆಂಗಳೂರು\ಮೈಸೂರು : ಪ್ರತಾಪ್ ಸಿಂಹನನ್ನ ಪಾರ್ಟಿಯಲ್ಲಿ ನೆಗ್ಲೆಕ್ಟ್ ಮಾಡಿ ಬಿಟ್ಟಿದ್ದಾರಲ್ಲ. ಅದಕ್ಕೆ ಕೋರ್ಟ್ವರೆಗೆ ಹೋಗಿರಬೇಕು. ದಸರಾ ಉದ್ಘಾಟನೆ ವಿಚಾರ ಕೋರ್ಟ್ನಲ್ಲೇ ತೀರ್ಮಾನ ಆಗಲಿ ಬಿಡಿ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿರೋಧಿಸಿ ಪ್ರತಾಪ್ ಸಿಂಹ ಕೋರ್ಟ್‌ಗೆ ಹೋಗಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಹೈದರಾಲಿ, ಟಿಪ್ಪು, ಮಿರ್ಜಾ ಇಸ್ಮಾಯಿಲ್, ನಿಸಾರ್ ಅಹಮದ್ ಅವರ ಬಗ್ಗೆ ಬಿಜೆಪಿ ಅವರು ಕೋರ್ಟ್ಗೆ ಹೋಗಿರಲಿಲ್ಲ. ಪ್ರತಾಪ್ ಸಿಂಹ ಅವರನ್ನು ಪಾರ್ಟಿಯಲ್ಲಿ ನೆಗ್ಲೆಕ್ಟ್ ಮಾಡಿದ್ದಾರಲ್ಲ. ಅದಕ್ಕೆ ಕೋರ್ಟ್ವರೆಗೆ ಹೋಗಿರಬೇಕು ಎಂದು ವ್ಯಂಗ್ಯವಾಡಿದರು.

ಮದ್ದೂರು ಗಲಾಟೆ ಬಗ್ಗೆ ಸಿಎಂ ಸಿದ್ದರಾಮಯ್ಯ ವಿವರಣೆ ಪಡೆದಿದ್ದು, ಗೃಹ ಕಚೇರಿ ಕೃಷ್ಣಾದಲ್ಲಿ ಪೊಲೀಸ್ ಮಹಾನಿರ್ದೇಶಕ ಸಲೀಂ, ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರಿಂದ ಮಾಹಿತಿ ಪಡೆದಿದ್ದಾರೆ.

ಮದ್ದೂರು ಗಲಾಟೆ ವಿಚಾರದ ಬಗ್ಗೆ ಮಾತಾಡಿದ ಸಿಎಂ, ಬಿಗಿ ಬಂದೋಬಸ್ತ್‌ ಮಾಡಲು ಪೊಲೀಸರಿಗೆ ಸೂಚನೆ ನೀಡಿದರು. ಇದೇ ವೇಳೆ ಮದ್ದೂರು ಎಂಎಲ್‌ಎ ಏನ್ ಮಾಡ್ತಾ ಇದ್ದಾನೆ ಎಂದು ಕೇಳಿದರು. ಅದಕ್ಕೆ ಸರ್ ಲಂಡನ್‌ಗೆ ಹೋಗಿದ್ದಾರೆ. ಮಗಳು ಅಲ್ಲಿ ಇದ್ದಾಳೆ ಎಂದು ಸಚಿವ ಚಲುವರಾಯಸ್ವಾಮಿ ಉತ್ತರಿಸಿದರು ಎಂದು ಹೇಳಲಾಗಿದೆ.