ಮನೆ ದೇಶ ಭೀಕರ ರಸ್ತೆ ಅಪಘಾತ:  10 ಜನರ ಸಾವು, 7 ಮಂದಿ ಸ್ಥಿತಿ ಗಂಭೀರ

ಭೀಕರ ರಸ್ತೆ ಅಪಘಾತ:  10 ಜನರ ಸಾವು, 7 ಮಂದಿ ಸ್ಥಿತಿ ಗಂಭೀರ

0

ಉತ್ತರ ಪ್ರದೇಶ(Uttarpradesh): ಹರಿದ್ವಾರದಲ್ಲಿ ಪವಿತ್ರ ಸ್ನಾನ ಮುಗಿಸಿ ಹಿಂತಿರುಗುತ್ತಿದ್ದ 17 ಮಂದಿ ಭಕ್ತರಿದ್ದ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸಾವಿಗೀಡಾಗಿರುವ ಘಟನೆ ಇಂದು ಬೆಳಗ್ಗೆ ಪಿಲಿಭಿತ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 730 ರಲ್ಲಿ ನಡೆದಿದೆ.

ಗಜರೌಳ ಪೊಲೀಸ್ ಠಾಣಾ ವ್ಯಾಪ್ತಿಯ ಮಾಳಮೂರಿನಲ್ಲಿ ನಡೆದ ಅಪಘಾತದಲ್ಲಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 9 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ವೇಳೆ ಇಬ್ಬರು ಮೃತಪಟ್ಟಿದ್ದಾರೆ. ಉಳಿದ 7 ಜನರ ಸ್ಥಿತಿ ಚಿಂತಾಜನಕವಾಗಿದೆ.

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತಈ ಕುರಿತು ಸ್ಥಳಕ್ಕೆ ಪಿಲಿಭಿತ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಪುಲ್ಕಿತ್ ಖರೆ ಮತ್ತು ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಜರೌಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.