ಮನೆ ರಾಜಕೀಯ ರಾಷ್ಟ್ರಪತಿ ಚುನಾವಣೆ: ನಾಳೆ ನಾಮಪತ್ರ ಸಲ್ಲಿಸಲಿರುವ ಎನ್ ಡಿ ಎ ದ್ರೌಪದಿ ಮುರ್ಮು

ರಾಷ್ಟ್ರಪತಿ ಚುನಾವಣೆ: ನಾಳೆ ನಾಮಪತ್ರ ಸಲ್ಲಿಸಲಿರುವ ಎನ್ ಡಿ ಎ ದ್ರೌಪದಿ ಮುರ್ಮು

0

ಭುವನೇಶ್ವರ (ಒಡಿಶಾ): ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಇಂದು ಭುವನೇಶ್ವರದಿಂದ ದೆಹಲಿಗೆ ತೆರಳಿದ್ದಾರೆ. ನಾಳೆ ಅವರು ರಾಷ್ಟ್ರಪತಿ ಚುನಾವಣೆಗಾಗಿ ತಮ್ಮ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಈ ಹಿನ್ನೆಲೆ ಇಂದು ಅವರು ಭುವನೇಶ್ವರದಿಂದ ದೆಹಲಿಗೆ ತೆರಳಿದ್ದಾರೆ.

ಕೇಂದ್ರ ಸರ್ಕಾರ ಈಗಾಗಲೇ ಅವರಿಗೆ ಝೆಡ್‌ ಪ್ಲಸ್‌ ಭದ್ರತೆಯನ್ನು ಕಲ್ಪಿಸಲಾಗಿದ್ದು, ಭುವನೇಶ್ವರ ವಿಮಾನ ನಿಲ್ದಾಣದಿಂದ ಬೆಳಿಗ್ಗೆ 9.40 ಕ್ಕೆ ತಮ್ಮ ಪ್ರಯಾಣವನ್ನು ಬೆಳಸಿದ್ದಾರೆ.

ಭಾರತದ 16 ನೇ ರಾಷ್ಟ್ರಪತಿ ಚುನಾವಣೆಯು  ಜುಲೈ 18 ರಂದು ನಡೆಯಲಿದೆ. ಜುಲೈ 21 ರಂದು ಮತ ಎಣಿಕೆಯು ನಡೆಯಲಿದೆ.

ದೇಶದ ಉನ್ನತ ಸಾಂವಿಧಾನಿಕ ಹುದ್ದೆಗೆ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಆಯ್ಕೆ ಆಗಿದ್ದು, ಅವರ ವಿರುದ್ಧ ಮುರ್ಮು ಚುನಾವಣಾ ಹೋರಾಟ ನಡೆಸಲಿದ್ದಾರೆ.